Advertisement

ಮೂಡುಬಿದಿರೆ: ಟಿಪ್ಪರ್‌ ಚಲಾಯಿಸಿ ವ್ಯಕ್ತಿಯ ಕೊಂದವನ ಸೆರೆ

12:43 AM Feb 07, 2023 | Team Udayavani |

ಮೂಡುಬಿದಿರೆ: ಕಳೆದ ಶುಕ್ರವಾರ ಟಿಪ್ಪರ್‌ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್‌ ಚಾಲಕ ಆರೀಸ್‌ ನನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿ ಬೆಟ್ಟುವಿನಲ್ಲಿ ಬಂಧಿಸಿದ್ದಾರೆ.

Advertisement

ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್‌ ರಾಡ್‌ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್‌ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.ತಲೆ ಮರೆಸಿಕೊಂಡಿದ್ದ ಟಿಪ್ಪರ್‌ ಚಾಲಕ ಆರೀಸ್‌ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next