Advertisement

ಮೂಡಿಗೆರೆ: ಗುಂಪುಗಳ ನಡುವೆ ಮಾರಾಮಾರಿ: ಓರ್ವನ ಬಂಧನ

11:21 AM Nov 14, 2021 | Team Udayavani |

ಮೂಡಿಗೆರೆ: ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

Advertisement

ಗಲಾಟೆಯಲ್ಲಿ ಒಬ್ಬ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಕೋಲಾರದಲ್ಲಿ ದತ್ತಮಾಲಧಾರಿಗಳಿದ್ದ ಬಸ್ ಮೇಲೆ ಮೇಲೆ ಕಲ್ಲು ತೂರಾಟ!

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಬಸ್ ಸ್ಟ್ಯಾಂಡ್ ನಲ್ಲಿ ಇದ್ದ ಸಿ ಸಿ ಕ್ಯಾಮೆರಾಗಳು ನಿದ್ದೆಗೆ ಜಾರಿದ್ದು ವಿಪರ್ಯಾಸ. ಇತ್ತೀಚೆಗೆ ನಿಲ್ದಾಣದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿ ಮತ್ತು ಮಹಿಳೆಯರ ಭದ್ರತೆ ಮರೀಚಿಕೆಯಾಗಿದೆ. ಘೋರ ದುರಂತ ನಡೆಯುವ ಮುನ್ನ ಸಿ ಸಿ ಕ್ಯಾಮೆರಾವನ್ನು ದುರಸ್ತಿಗೊಳಿಸಬೇಕು ಹಾಗೂ ಪುಂಡರ ಹಾವಳಿ ನಿಯಂತ್ರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next