Advertisement

ಮೂರ್ನಾಡಿನ ಕಾವ್ಯಶ್ರೀ ಅವರಿಗೆ ಜಿಲ್ಲಾ ಯುವ ಪ್ರಶಸ್ತಿ ಪ್ರದಾನ

01:00 AM Feb 26, 2019 | Team Udayavani |

ಮಡಿಕೇರಿ: ಮೂರ್ನಾಡು ಅನ್ನಪೂರ್ಣೇಶ್ವರಿ ಯುವತಿ ಮಂಡಳಿಯ ಕಾವ್ಯಶ್ರೀ ಅವಗೆ ಜಿಲ್ಲಾ ಮಟ್ಟದ ಅತ್ಯುತ್ತಮ ವೈಯುಕ್ತಿಕ ಯುವ ಪ್ರಶಸ್ತಿ ಲಭಿಸಿದೆ.

Advertisement

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕಾವ್ಯಶ್ರೀ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಯುವ ಜನೋತ್ಸವಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸ್ಪತ್ಛತೆ, ಸಾಮಾಜಿಕ ಕಳಕಳಿ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು  ನೀಡಲಾಗಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್‌  ತಿಳಿಸಿದ್ದಾರೆ.

ಪ್ರಶಸ್ತಿಯು ಐದು ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಫೆ.22 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮ್ಮೇಳನದಲ್ಲಿ ಜಿಲ್ಲಾ ಯುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next