Advertisement

ಬಜೆಟ್‌ನಲ್ಲಿ ಹೆಚ್ಚು ಅನುದಾನ: ಸಿಎಂ

11:38 AM Jun 29, 2018 | |

ಬೆಂಗಳೂರು: “ಮೂಳೆ ಮಜ್ಜೆ ಕಸಿ’ (ಬೋನ್‌ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌) ಚಿಕಿತ್ಸಾ ವ್ಯವಸ್ಥೆ ಅಳವಡಿಸಿಕೊಳ್ಳಲು ಕಿದ್ವಾಯಿ ಸಂಸ್ಥೆಗೆ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದ್ದು, ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಇದೇ ವೇಳೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

Advertisement

“ಮೂಳೆ ಮಜ್ಜೆ ಸಮಸ್ಯೆಯಿಂದ ಬಳಲುವವರ ನೋವು ಕಣ್ಣಾರೆ ಕಂಡಿದ್ದೇನೆ. ಚಿಕ್ಕ ಮಕ್ಕಳಲ್ಲೂ ಈ ಸಮಸ್ಯೆ ಇತ್ತಿಚಿಗೆ ಹೆಚ್ಚಾಗಿದೆ. ಮೂಳೆ ಮಜ್ಜೆ ಕಸಿ ಮಾಡಬೇಕಾದರೆ ಒಬ್ಬ ರೋಗಿಗೆ 30 ರಿಂದ 35 ಲಕ್ಷ ರೂ. ಬೇಕು. ಬಡವರಿಂದ ಈ ವೆಚ್ಚ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಕಡಿಮೆ ದರದಲ್ಲಿ ಚಿಕಿತ್ಸೆ ಸಿಗಲು ಮೂಳೆ ಮಜ್ಜೆ ಕಸಿ ಚಿಕಿತ್ಸಾ ವ್ಯವಸ್ಥೆಯನ್ನು ಕಿದ್ವಾಯಿ ಸಂಸ್ಥೆ ಅಳವಡಿಸಿಕೊಳ್ಳಲಿ.

ಇದಕ್ಕೆ ಬೇಕಾಗುವ ಹಣಕಾಸು ಸರ್ಕಾರ ನೀಡಲಿದೆ. ಈ ಬಗ್ಗೆ ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದೇನೆ. ಬಜೆಟ್‌ನಲ್ಲಿ ಅನುದಾನದ ಘೋಷಣೆ ಮಾಡುತ್ತೇನೆ,’ ಎಂದರು. ಜತೆಗೆ “ಆರೋಗ್ಯ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಆರ್ಥಿಕ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ಸಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next