Advertisement

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

02:09 PM Oct 25, 2024 | Team Udayavani |

ಹುಬ್ಬಳ್ಳಿ: ಬಿಜೆಪಿಯಿಂದ ಎಂಟು ಶಾಸಕರಷ್ಟೇ ಅಲ್ಲ ಇನ್ನಷ್ಟು ಶಾಸಕರು ಕಾಂಗ್ರೆಸ್ ಗೆ ಬರಬಹುದು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಬೇಸತ್ತಿದ್ದಾರೆ ಎಂದು ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ ಶಾಸಕರು, ಜನರು ಕೂಡ ಬೇಸತ್ತಿದ್ದಾರೆ. ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.

ಬುದ್ಧಿ ಭ್ರಮಣೆ: ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎದು ಹೇಳುವವರ ಬದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next