Advertisement

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಿಲ್ಲ; ಸೋನಿಯಾ ಭೇಟಿ ಬಳಿಕ ಪವಾರ್

09:27 AM Nov 19, 2019 | Team Udayavani |

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ ಜತೆ ಸೇರಿ ಸರ್ಕಾರ ರಚಿಸುವ ಬಗ್ಗೆ ಈಗಲೇ ಏನನ್ನೂ ಹೇಳಲು ಬಯಸುವುದಿಲ್ಲ. ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ನಾವು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಸೋಮವಾರ ಸಂಜೆ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಈ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸೋನಿಯಾಗಾಂಧಿ ಜತೆಗಿನ ಮಾತುಕತೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಪವಾರ್, ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಾತುಕತೆ ನಡೆದಿಲ್ಲ. ಇದು ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವಿನ ಮಾತುಕತೆಯಾಗಿದೆ ಎಂದು ತಿಳಿಸಿದರು.

ಒಂದು ವೇಳೆ ಶಿವಸೇನಾ ಜತೆಗಿನ ಮೈತ್ರಿಯನ್ನು ಸೋನಿಯಾಗಾಂಧಿ ವಿರೋಧಿಸಿದರೆ ಎಂಬ ಪ್ರಶ್ನೆಗೆ ಪವಾರ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಾವು ಕೆಲವು ಸಣ್ಣ ಪಕ್ಷಗಳ ಬೆಂಬಲವನ್ನೂ ಪಡೆದಿದ್ದೇವು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳ ಜತೆಯೂ ಚರ್ಚೆ ನಡೆಸಬೇಕಾಗಿದೆ ಎಂದು ಪವಾರ್ ಹೇಳಿದರು. ನಾವು ರಾಜಕೀಯ ಬೆಳವಣಿಗೆಯನ್ನು ಅವಲೋಕಿಸುತ್ತಿದ್ದೇವೆ. ಮುಂದಿನ ನಡೆ ಬಗ್ಗೆ ನಾವು ಉಭಯ ಪಕ್ಷಗಳ ನಾಯಕರ ಜತೆ ಚರ್ಚೆ ನಡೆಸುವುದಾಗಿ ಪವಾರ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next