Advertisement

ವಿಷ ಉಣಿಸಿ 10ಕ್ಕೂ ಹೆಚ್ಚು ಸಾಕು, ಬೀದಿ ನಾಯಿಗಳ ಮಾರಣಹೋಮ

12:30 AM Apr 01, 2024 | Team Udayavani |

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷ ಹಾಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿದ ಘಟನೆ ಮಾ. 31ರಂದು ಬೆಳಕಿಗೆ ಬಂದಿದೆ.

Advertisement

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದೋ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿರುವ ಅನುಮಾನ ವ್ಯಕ್ತವಾಗಿದೆ. ಇದನ್ನು ತಿಂದಿರುವ ನಾಯಿಗಳು ಜೀವತೆತ್ತಿವೆ. ತಡರಾತ್ರಿ ಈಸ್ಟರ್‌ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತತ್‌ಕ್ಷಣ ಪಂಚಾಯತ್‌ ಅಧ್ಯಕ್ಷ ಗಣೇಶ್‌ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಹಲವಾರು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.

ಸಾವನ್ನಪ್ಪಿದ ನಾಯಿಗಳನ್ನು ಪಂಚಾಯತ್‌ ವತಿಯಿಂದ ದಫನ ಮಾಡಲಾಯಿತು. ಕಳೆದ ಎರಡು ವರ್ಷಗಳ ಹಿಂದೆ ಇದೇ ರೀತಿಯ ಘಟನೆ ಈ ಹಿಂದೆ ಇದೇ ಪರಿಸರದಲ್ಲಿ ನಡೆದಿತ್ತು. ಬೀದಿ ನಾಯಿಗಳ ಉಪಟಳದ ಹಿನ್ನೆಲೆಯಲ್ಲಿ ಈ ಘಟನೆ ನಡೆಸಿರುವ ಸಾಧ್ಯತೆ ಅಥವಾ ಯಾವುದೇ ಪೂರ್ವ ದ್ವೇಷದಿಂದ ನಡೆಸಿರುವ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next