Advertisement

ಆಹಾರ ಸೇವನೆ; 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

04:30 PM Mar 12, 2022 | Kavyashree |

ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಗುರುವಾರ ರಾತ್ರಿ ಆಹಾರ ಸೇವನೆ ಬಳಿಕ 10 -15 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ರಾತ್ರಿ ಊಟ ಮಾಡಿದ ಬಳಿಕ ಕೆಲ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲವರಿಗೆ ವಾಂತಿ ಮತ್ತು ಕೆಲವರಿಗೆ ಉಸಿರಾಟದ ತೊಂದರೆ ಆಗಿದೆ. ಕೂಡಲೇ ಹಾಸ್ಟೆಲ್‌ ವಾರ್ಡನ್‌ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ವಿದ್ಯಾರ್ಥಿನಿಯರು ಹೊರಗಡೆಯಿಂದ ಏನಾದರೂ ಪದಾರ್ಥ ತರಿಸಿಕೊಂಡು ತಿಂದಿದ್ದಾರೆಯೇ ಎಂಬುದು ತನಿಖೆ ಮೂಲಕ ಗೊತ್ತಾಗಬೇಕಿದೆ. ವಿದ್ಯಾರ್ಥಿನಿಯರು ನಾವು ಹೊರಗಿನಿಂದ ಯಾವುದೇ ಪದಾರ್ಥ ತರಿಸಿಕೊಂಡು ತಿಂದಿಲ್ಲ ಎಂದು ತಿಳಿಸಿದ್ದಾರೆ. ಚಿಕಿತ್ಸೆ ನಂತರ ಎಲ್ಲಾ ವಿದ್ಯಾರ್ಥಿನಿಯರು ಚೇತರಿಸಿಕೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್‌ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪ್ರೊ. ಲತಾ, ಕುವೆಂಪು ವಿವಿ ಸಿಂಡಿಕೇಟ್‌ ಸದಸ್ಯ ಸಂತೋಷ್‌ ಬಳ್ಳೆಕೆರೆ, ಜಗನ್ನಾಥ್‌, ಹರ್ಷ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next