Advertisement

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

12:22 AM Apr 24, 2024 | Team Udayavani |

ಉಳ್ಳಾಲ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದ್ದು, ಬರಗಾಲ ಪೀಡಿತ ಸಮಸ್ಯೆಗೆ ಕೋರ್ಟ್‌ನಲ್ಲಿ ನ್ಯಾಯ ಪಡೆಯಬೇಕಾದ ಪರಿಸ್ಥಿತಿ ಬಂದಿದೆ. ಈ ಚುನಾವಣೆಯಲ್ಲಿ ಮಹತ್ತರ ಬದಲಾವಣೆ ಕಾಣುತ್ತಿದೆ.

Advertisement

ಕರ್ನಾಟಕದಲ್ಲೂ ಕಾಂಗ್ರೆಸ್‌ 20ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಮಂಗಳವಾರ ಉಳ್ಳಾಲ ದರ್ಗಾ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ ಜನತೆಗೆ ನ್ಯಾಯ ಸಿಗಬೇಕು ಎಂಬುದು ಕಾಂಗ್ರೆಸ್‌ನ ಹೋರಾಟ ಆಗಿದೆ. ಅಧಿಕಾರ ಸಿಗುವ ಮೊದಲು, ಸಿಕ್ಕಿದ ಅನಂತರ ಕೂಡ ನ್ಯಾಯ ಪರ ಹೋರಾಟದಲ್ಲಿದೆ ಎಂದರು.

ಈವರೆಗೆ 18 ಸ್ಥಾನ ಸಿಗ ಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೆವು. ಈಗಿನ ವಾತಾವರಣ ನೋಡುವಾಗ 20ಕ್ಕೂ ಅಧಿಕ ಸ್ಥಾನಗಳು ಸಿಗಲಿವೆ ಎಂದರು. ಮಂಗಳೂರು, ಉಡುಪಿ- ಚಿಕ್ಕಮಗಳೂರು, ಶಿವಮೊಗ್ಗ ಈ ಮೂರರಲ್ಲಿ ಕಾಂಗ್ರೆಸ್‌ ಜಯಭೇರಿ ಭಾರಿಸಲಿದೆ ಎಂದರು. ಪ್ರಮುಖರಾದ ಯು.ಟಿ. ಇಫ್ತಿಕಾರ್‌ ಫರೀದ್‌, ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next