Advertisement

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

03:03 PM Sep 30, 2023 | Team Udayavani |

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದಲ್ಲಿರುವ ಕಲುಷಿತ ನೀರು ಸೇವಿಸಿ ಕಸ್ತೂರ ಬಾ ವಸತಿ ನಿಲಯದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

Advertisement

ಇಂದು ಬೆಳಗಿನ ಜಾವ ವಸತಿ‌ ನಿಲಯದಲ್ಲಿ ಬಿಸ್ಕೆಟ್ಸ್, ಟೀ ಸೇವಿಸಿರುವ ವಿದ್ಯಾರ್ಥಿನಿಯರು ಗ್ರಾಮದ ಪ್ರೌಢ ಶಾಲೆಗೆ ಹೋಗಿದ್ದರು. ಈ ವೇಳೆ ಶಾಲೆಯಲ್ಲಿಯೇ ವಿದ್ಯಾರ್ಥಿನಿಯರಿಗೆ ವಾಂತಿ, ಬೇಧಿ, ತಲೆ ಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ತಕ್ಷಣ ವಿದ್ಯಾರ್ಥಿಗಳನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

ಇನ್ನು ಆಸ್ಪತ್ರೆಗೆ ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ.‌ಆರ್.ವಿ ನಾಯಕ‌ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇದಕ್ಕೆ ಕಲುಷಿತ ನೀರು ಕಾರಣ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next