Advertisement

300 ಕ್ಕಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ: ಹೊಸ ಮಾರ್ಗಸೂಚಿಗಳು

11:58 AM Dec 26, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಕೋವಿಡ್ ತಡೆ ಮಾರ್ಗ ಸೂಚಿಗಳನ್ನು ಪ್ರಕಟಿಸಲಾಗಿದೆ.

Advertisement

ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ಡಿ. 30ರಿಂದ ಜನವರಿ 02 ರ ವರೆಗೆ ರೆಸ್ಟೊರೆಂಟ್ , ಪಬ್, ಕ್ಲಬ್ ಮತ್ತು ಹೋಟೆಲ್ ಗಳು 50 % ಮಾತ್ರ ಕಾರ್ಯ ನಿರ್ವಹಿಸಬೇಕು. ಎಲ್ಲಾ ಸಿಬ್ಬಂದಿಗಳು ಅಗತ್ಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ ಆರ್ ಟಿ-ಪಿಸಿಆರ್ ರಿಪೋರ್ಟ್ ಹೊಂದಿರಬೇಕು. 2  ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.

ಡಿ. 28ರಿಂದ ಮದುವೆ , ಶುಭ ಸಮಾರಂಭಗಳು, ಕಾನ್ಫರೆನ್ಸ್ ಗಳು, ಮೀಟಿಂಗ್ ಗಳು ಮತ್ತು ಇನ್ನಿತರ ಎಲ್ಲಾ ಸಭೆ, ಕಾರ್ಯಕ್ರಮಗಳಲ್ಲಿ 300 ಕ್ಕಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ. ಮಾಸ್ಕ್ , ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಆಯೋಜಕರು ಸಮಾರಂಭದಲ್ಲಿ ಕಡ್ದಾಯವಾಗಿ ಅನುಸರಿಸಬೇಕು.

ಗಡಿ ಜಿಲ್ಲೆಗಳಲ್ಲಿ ಅದರಲ್ಲಿಯೂ ಕೇರಳ ಮತ್ತು ಮಹಾರಾಷ್ಟ ಗಡಿಗಳಲ್ಲಿ ವ್ಯಾಪಕ ಕಟ್ಟೆಚ್ಚರ. ಪ್ರಯಾಣಿಕರ ತಪಾಸಣೆ.

Advertisement

ಸಚಿವರಾದ ಡಾ.ಸುಧಾಕರ್, ಆರ್.ಅಶೋಕ್, , ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next