Advertisement

ಅವಳಿ ನಗರದಲ್ಲಿ ಒಂದು ಗಂಟೆಗೂ ಅಧಿಕ ಮಳೆ

12:22 PM Jul 12, 2020 | Suhan S |

ಗದಗ: ಅವಳಿ ನಗರದಲ್ಲಿ ವರುಣನ ಆರ್ಭಟ ಶನಿವಾರವೂ ಮುಂದುವರಿದಿದೆ. ಅವಳಿ ನಗರದಲ್ಲಿ ಒಂದೂವರೆ ಗಂಟೆ ಕಾಲ ಬಿರುಸಿನ ಮಳೆ ಸುರಿಯಿತು.

Advertisement

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಸುಮಾರು ಒಂದೂವರೆ ಗಂಟೆಗಳ ಕಾಲ ಬಿಟ್ಟು ಬಿಡದಂತೆ ಬಿರುಸಿನಿಂದ ಮಳೆಯಾಯಿತು. ಮಳೆಯಿಂದ ಇಲ್ಲಿನ ಹೊಂಬಳ ನಾಕಾ ಜನತಾ ಕಾಲೋನಿ, ಎಸ್‌.ಎಂ. ಕೃಷ್ಣಾ ನಗರ, ಅಂಬೇಡ್ಕರ್‌ ನಗರ, ಸಿದ್ರಾಮೆಶ್ವರ ನಗರ, ಕಂಬಾರ ಸಾಲ, ಜವಳಗಲಿ ಹಾಗೂ ಬೆಟಗೇರಿ ವ್ಯಾಪ್ತಿಯ ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಮಳೆ ನೀರು ಮನೆಗೆ ನುಗ್ಗಿದ್ದರಿಂದ ಜನರು ಅಗತ್ಯ ವಸ್ತುಗಳು ಹಾಗೂ ಪಾತ್ರೆಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಯಿತು. ಇದೇ ವೇಳೆ ಭಾರಿ ಮಳೆಯಿಂದಾಗಿ ಇಲ್ಲಿನ ಜನರಲ್‌ ಕಾರ್ಯಪ್ಪ ವೃತ್ತ, ಮಹೇಂದ್ರಕರ ಸರ್ಕಲ್‌ ಹಾಗೂ ರೈಲ್ವೇ ಬ್ರಿಡ್ಜ್ ಮತ್ತಿತರೆ ಭಾಗದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಅದರಂತೆ ತಾಲೂಕಿನ ಹುಲಕೋಟಿ, ಕುರ್ತಕೋಟಿ, ಹರ್ತಿ ಹಾಗೂ ನಾಗಾವಿ ಭಾಗದಲ್ಲೂ ಉತ್ತಮ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next