Advertisement

ಕೃಷ್ಣ ನದಿಗೆ ಮತ್ತಷ್ಟು ನೀರು: ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ

02:20 PM Oct 16, 2020 | keerthan |

ರಾಯಚೂರು: ಕೃಷ್ಣ ನದಿಗೆ ಹೆಚ್ಚುವರಿ ನೀರು ಹರಿಸಿದ್ದು ನದಿಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ನಾರಾಯಣಪುರ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ಹಾಗೂ ಸನ್ನತಿಯಿಂದ 3.50 ಲಕ್ಷ ಕ್ಯೂಸೆಕ್ ನಿಂದ ನೀರು ಹರಿಸಿದ್ದು ರಾಯಚೂರು ತಾಲೂಕಿನಲ್ಲಿ 5.30 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ.

Advertisement

ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ತುಂಬಿ ಹರಿಯುತ್ತಿದ್ದರೆ, ಡಿ.ರಾಂಪುರ, ಆತ್ಕೂರು, ಬೂರ್ದಿಪಾಢ್ ಸೇರಿದಂತೆ ಸೇರಿದಂತೆ 17 ಹಳ್ಳಿಗಳಿಗೆ ಆತಂಕ ಎದುರಾಗಿದೆ. ನದಿ ಪಾತ್ರದ ಜಮೀನುಗಳು ಮುಳುಗಡೆಯಾಗಿದೆ.

ಲಿಂಗಸುಗೂರು ತಾಲೂಕಿನ ಮಾದರಗಡ್ಡಿ ನಡುಗಡ್ಡೆಯಲ್ಲಿ ಗ್ರಾಮಸ್ಥರು ಸಿಲುಕಿದ್ದಾರೆ. ಇಲ್ಲಿ 13 ಜನ ವಾಸವಾಗಿದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟಾದರೂ ಊರು ಬಿಡಲು ಒಪ್ಪುತ್ತಿಲ್ಲ. ಗುರ್ಜಾಪುರ ಗ್ರಾಮಸ್ಥರ ಮನವೊಲಿಕೆಗೆ ಮುಂದಾದರೂ ಗ್ರಾಮಸ್ಥರು ಒಪ್ಪುತ್ತಿಲ್ಲ. ಬಸ್‌ಗಳನ್ನ ತಂದು ರಾತ್ರಿಯಿಂದ ಅಧಿಕಾರಿಗಳು ಮನವೊಲಿಸಿದರು. ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು ಶಾಶ್ವತ ಸ್ಥಳಾಂತರ ಮಾಡಲು ಒತ್ತಾಯಿಸುತ್ತಿದ್ದಾರೆ.

ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಶೀಲಹಳ್ಳಿಯಿಂದ ಹಂಚಿನಾಳ, ಯರಗೋಡ, ಕಡದರಗಡ್ಡೆ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ದೇವದುರ್ಗ ತಾಲೂಕಿನ ಹೂವಿನ ಹೆಡಗಿ ಸೇತುವೆ ಕೂಡ ಮುಳುಗಡೆ ಹಂತಕ್ಕೆ ತಲುಪಿದೆ.

Advertisement

Udayavani is now on Telegram. Click here to join our channel and stay updated with the latest news.

Next