Advertisement

ಮರ್ಣೆ: ರಸ್ತೆ ಅಂಚಿನಲ್ಲಿ ತ್ಯಾಜ್ಯ ರಾಶಿ

12:50 AM Jan 22, 2019 | Team Udayavani |

ಅಜೆಕಾರು: ಮರ್ಣೆ ಗ್ರಾ.ಪಂ. ವ್ಯಾಪ್ತಿಯ ಕೈಕಂಬ ಮತ್ತು ನೂಜಿ ಪ್ರದೇಶದ ರಸ್ತೆಯ ಅಂಚಿನಲ್ಲಿಯೇ ತ್ಯಾಜ್ಯ ವಸ್ತುಗಳು ರಾಶಿ ಬಿದ್ದಿದ್ದು ವಿಲೇವಾರಿ ಪಂಚಾಯತ್‌ ಆಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.

Advertisement

ಸ್ವತ್ಛತೆ  ಕಾಪಾಡುವ  ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಿದ್ದರೂ ಸಾರ್ವಜನಿಕರಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ.

ಪ್ರತಿನಿತ್ಯ ಇಲ್ಲಿ ಕಸ ವಿಲೇವಾರಿ ನಡೆಸಲಾಗುತ್ತಿದ್ದರೂ ಕೆಲ ವ್ಯಕ್ತಿಗಳು ಸಾರ್ವಜನಿಕ ಜಾಗಗಳಲ್ಲಿ ಪ್ಲಾಸ್ಟಿಕ್‌ ಸೇರಿದಂತೆ ಇತರ ತ್ಯಾಜ್ಯವನ್ನು ಎಸೆಯುತ್ತಿದ್ದಾರೆ. ಅಜೆಕಾರು ಕೈಕಂಬ, ನೂಜಿ ತಿರುವಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಚರಂಡಿಗಳಲ್ಲಿ ತ್ಯಾಜ್ಯದ ರಾಶಿ ತುಂಬಿರುವುದರಿಂದ ಪರಿಸರ ದುರ್ವಾಸನೆ ಬೀರುತ್ತಿದ್ದು, ಮೂಗು ಮುಚ್ಚಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next