Advertisement

ಹಲವು ರೋಗಕ್ಕೆ ಸಿರಿಧಾನ್ಯ ರಾಮಬಾಣ

03:48 PM Feb 14, 2018 | |

ಹನೂರು: ಆಧುನಿಕತೆ ಬೆಳೆದಂತೆಲ್ಲ ಮಾನವ ಹಲವು ರೋಗ ರುಜಿಗಳಿಗೆ ತುತ್ತಾಗುತ್ತಿದ್ದು, ನಿವಾರಣೆಗೆ ಸಿರಿಧಾನ್ಯ ರಾಮಬಾಣ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್‌ಕುಮಾರ್‌ ತಿಳಿಸಿದರು.

Advertisement

ಕ್ಷೇತ್ರ ವ್ಯಾಪ್ತಿಯ ವಡಕೆಹಳ್ಳ ಗ್ರಾಮದಲ್ಲಿ ವಿಶ್ವ ರೈತ ಚೇತನ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಅವರ 82ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಮ್ಮಿಕೊಂಡಿದ್ದ ಮಹದೇಶ್ವರ ಸಾವಯವ ಸಿರಿಧಾನ್ಯ ಸ್ವ-ಸಹಾಯ ಸಂಘ ಮತ್ತು ಸಿರಿ ಧಾನ್ಯಗಳ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯದಲ್ಲಿಯೇ ಅತಿ ಹೆಚ್ಚು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರನ್ನು ಜಿಲ್ಲೆ ಹೊಂದಿದೆ. ಆದರೆ, ವ್ಯಾಪಾರೀಕರಣಕ್ಕೆ ಸಿಲುಕಿ ಕಲಬೆರಕೆ ರಾಸಾಯನಿಕ ಸಿಂಪಡಣೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ಸಿಲುಕಿ ರುವುದು ದುರದೃಷ್ಟಕರ. ರೈತರು ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಿದರೆ, ಔಷಧೀಯ ಗುಣಗಳುಳ್ಳ ಆಹಾರ ಪದಾರ್ಥಗಳ ಉತ್ಪಾದನೆ ಜೊತೆಗೆ ಆರ್ಥಿಕವಾಗಿಯೂ ಸಬಲರಾಗಬಹುದು. ಈ ರೀತಿಯ ಸಂಸ್ಕರಣಾ ಘಟಕಗಳು ಜಿಲ್ಲಾದ್ಯಂತ ತಲೆ ಎತ್ತುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಸಿರಿಧಾನ್ಯ ವರ್ಷ: ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ತಿರುಮಲ್ಲೇಶ್‌ ಮಾತನಾಡಿ, 2018-19ನೇ ಸಾಲನ್ನು ಸಿರಿಧಾನ್ಯಗಳ ವರ್ಷವೆಂದು ಘೋಷಣೆ ಮಾಡಲು ಕ್ರಮವಹಿಸಲಾಗಿದೆ. ಹೀಗಾಗಿ ಜಿಲ್ಲೆಯ ರೈತಪರ ಸಂಘಟನೆಗಳು ಈ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಿ ಸಾವಯವ ಕೃಷಿಗೆ ಒತ್ತು ನೀಡುವಂತೆ ಪ್ರೇರೇಪಿಸಬೇಕು.

ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಮಹತ್ವವನ್ನರಿತ ಕೃಷಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಮತ್ತು ಹೊರರಾಜ್ಯಗಳಿಗೂ ತೆರಳಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ಪ್ರಚಾರ ಮಾಡಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಸಾವಯವ ಸಿರಿಧಾನ್ಯ ಮೇಳವನ್ನೂ ಆಯೋಜಿಸಿ ಯಶಸ್ವಿಯಾಗಿದೆ ಎಂದು ತಿಳಿಸಿದರು. 

Advertisement

ಬಿತ್ತನೆ ಬೀಜ ಒದಗಿಸುವುದೇ ಸವಾಲು: ಸಿರಿಧಾನ್ಯ ಹೊರತುಪಡಿಸಿ ಉಳಿದಂತಹ ಬಿತ್ತನೆ ಬೀಜಗಳನ್ನು ಸರ್ಕಾರದಿಂದ ಸಬ್ಸಿಡಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸಲಾಗುತ್ತಿದೆ. ಆದರೆ, ಸಿರಿಧಾನ್ಯಗಳ ಉತ್ಪಾದನೆ ಅತ್ಯಲ್ಪ ಪ್ರಮಾಣದಲ್ಲಿದೆ. ಸಾಮೆ, ಜೋಳ, ನವಣೆ, ರಾಗಿ, ಸಜ್ಜೆ, ಆರ್ಕ, ಊದಲು ಬಿತ್ತನೆ ಬೀಜ ರೈತರ ಅವಶ್ಯಕತೆಗೆ ಅನುಗುಣವಾಗಿ ವಿತರಿಸುವುದು ಸವಾಲಾಗಿದೆ. ಈ ಹಿನ್ನೆಲೆ ರೈತರಪರ ಸಂಘಟನೆಗಳು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸನ್ಮಾನ: ಜಿಲ್ಲೆಯ ಬೋಗಾಪುರದಲ್ಲಿ ಅಂಧರ ಶಾಲೆ ಆರಂಭಿಸಿ ಪೋಷಣೆ ಮಾಡುತ್ತಿರುವ ದೀಪಾ ಅಕಾಡೆಮಿಯ ಮುಖ್ಯ ಶಿಕ್ಷಕಿ ಶಿಲ್ಪಾಗೆ ರೈತ ಚೇತನ ಪ್ರೋ.ಎಂಡಿಎನ್‌ ಪ್ರತಿಷ್ಠಾನದಿಂದ ನೀಡುವ ಸಾಮಾಜಿಕ ಕಳಕಳಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಬರಗೂರು ಕೆಳಮಠದ ಸುಬ್ರಹ್ಮಣ್ಯ ರಾಜೇಂದ್ರ ಸ್ವಾಮಿ, ಕೃಷಿ ನಿರ್ದೇಶಕ ಯೋಗೇಶ್‌, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌, ಕಾರ್ಯದರ್ಶಿ ಗುರುಪ್ರಸಾದ್‌, ಚೆಂಗಡಿ ಕರಿಯಪ್ಪ, ಒಬಳಿ ವಿದ್ಯಾಸಂಸ್ಥೆಯ ಗಂಗಾಧರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next