Advertisement

ಬಿಹಾರ ಕಳ್ಳಭಟ್ಟಿ ದುರಂತ: ದೆಹಲಿಯಲ್ಲಿ ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್

02:45 PM Dec 31, 2022 | Team Udayavani |

ನವದೆಹಲಿ : ಬಿಹಾರದಲ್ಲಿ ಕನಿಷ್ಠ 80 ಜನರ ಪ್ರಾಣಕ್ಕೆ ಸಂಚಕಾರ ತಂದಿದ್ದ ಕಳ್ಳ ಭಟ್ಟಿ ದುರಂತಕ್ಕೆ ಕಾರಣವಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

Advertisement

ದುರಂತದ ಪ್ರಮುಖ ಆರೋಪಿ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಾಮ್ ಬಾಬು ಮಹ್ತೋ ನನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ
ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮದ್ಯ ಮಾರಾಟವನ್ನು ನಿಷೇಧಿಸಲಾಗಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ ತಿಂಗಳ ಆರಂಭದಲ್ಲಿ ನಕಲಿ ಮದ್ಯದಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದರು. ಪೊಲೀಸರು ಅಕ್ರಮ ಮದ್ಯ ಪೂರೈಕೆಗೆ ಸಂಬಂಧಿಸಿ ಏಳು ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

ಮಹತೋ ದೆಹಲಿಯಲ್ಲಿ ಎಲ್ಲೋ ಅಡಗಿಕೊಂಡಿದ್ದಾನೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next