Advertisement

“ಮೋಸ್ಟ್ ವೆಲ್ ಕಮ್” : ಲಕ್ಷ್ಮೀ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಟಾಂಗ್

04:27 PM Feb 12, 2021 | Team Udayavani |

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಅವರಿಗೆ  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಟಾಂಗ್ ನೀಡಿದ್ದಾರೆ.

Advertisement

ಓದಿ :ಕಾಂಗ್ರೆಸ್ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷ : ಸತೀಶ್ ಜಾರಕಿಹೊಳಿ

“ಗೋಕಾಕಕ್ಕೆ‌ ಮೋಸ್ಟ್ ವೆಲ್ ಕಮ್” ಎಂದು  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಫೆ.12) ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

“ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿ” ಎಂದು  ‘ಮುಂದಿನ ಟಾರ್ಗೆಟ್ ಗೋಕಾಕ, ಪಕ್ಷ ಬಯಸಿದರೇ ಅಲ್ಲಿಂದಲೇ ಸ್ಪರ್ಧೆ’ ಎಂಬ ಹೇಳಿಕೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ಇನ್ನು, ಯಾಕೆ ಸರ್ಕಾರ ಪತನ ಆಗಿದೆ ಎನ್ನುವುದು ಅವರ ಗಾಡ್ ಫಾದರ್ ಗೆ ಕೇಳಿದರೆ ಒಳ್ಳೆಯದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಕೂಡ ಟಾಂಗ್ ನೀಡಿದ್ದಾರೆ.

Advertisement

ಓದಿ :  ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡುತ್ತಾರಾ, ಈಗಲೂ ಬೆದರಿಕೆಯಿದೆ: ಶಾಸಕ ಅಖಂಡ

Advertisement

Udayavani is now on Telegram. Click here to join our channel and stay updated with the latest news.

Next