Advertisement

ಮಡಿಕೇರಿಯಲ್ಲಿ ತಾಯಿ ಮಗಳ ಬರ್ಬರ ಹತ್ಯೆ

08:38 AM May 01, 2019 | Hari Prasad |

ಮಡಿಕೇರಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಾಯಿ ಮತ್ತು ಮಗಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಭೀಕರ ಘಟನೆ ಕೊಡಗು ಜಿಲ್ಲೆಯ ದೊಡ್ಡಮಲ್ತೆ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಕವಿತಾ ಹಾಗೂ 17 ವರ್ಷದ ಜಗಶ್ರೀ ಕೊಲೆಯಾದ ದುರ್ದೈವಿಗಳಾಗಿದ್ದಾರೆ.

Advertisement

ತಾಯಿ ಮತ್ತು ಮಗಳಿಬ್ಬರೂ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಕೊಲೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಈ ಕೃತ್ಯ ನಡೆದಿರುವ ಕುರಿತಾಗಿ ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಜಗಶ್ರೀ ಪುತ್ತೂರಿನಲ್ಲಿ ಕಾಲೇಜು ವ್ಯಾಸಾಂಗ ಮಾಡುತ್ತಿದ್ದಳು ಹಾಗೂ ರಜೆಯ ಕಾರಣದಿಂದ ಇದೀಗ ತನ್ನ ಮನೆಗೆ ಬಂದಿದ್ದಳು.
ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next