Advertisement

ಗುತ್ತಿಗಾರು: ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗು

02:54 PM Jun 29, 2022 | Team Udayavani |

ಗುತ್ತಿಗಾರು: ಮಗುವನ್ನು ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ‌.

Advertisement

ಅದೃಷ್ಟವಶಾತ್ ಮೂರು ವರ್ಷದ ಮಗು ಪೂರ್ವಿಕಾ ಬದುಕುಳಿದಿದ್ದು, ತಾಯಿ ಮೃತಪಟ್ಟಿದ್ದಾರೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಸುಳ್ಯದ ಖಾಸಗಿ ಕಾಲೇಜಿನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಪುರಸಭಾ ಮಾಜಿ ಅಧ್ಯಕ್ಷೆ ಪತಿಗೆ ಚಾಕುವಿನಿಂದ ಬೆದರಿಸಿ ಚಿನ್ನದ ಸರ,ಮೊಬೈಲ್ ಕಸಿದು ಪರಾರಿ

ಮಗು ಕೆರೆಯೊಳಗೆ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ.

ಮನೆಯವರು ಹಾಗೂ ಸ್ಥಳೀಯರ ಸಹಕಾರದಿಂದ ಮಗುವನ್ನು ರಕ್ಷಿಸಲಾಯಿತು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next