Advertisement

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

10:56 AM Jul 03, 2024 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರಗೊಂಡ ಅತ್ತೆ-ಮಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹಳೇ ಬೈಯಪ್ಪನಹಳ್ಳಿ ನಿವಾಸಿ ಚಂದ್ರಶೇಖರ್‌(54) ಮತ್ತು ಅವರ ಪತ್ನಿ ಶಾರದಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.

ಸೋಮವಾರ ಸಂಜೆ ಘಟನೆ ನಡೆದಿದ್ದು, ರಾತ್ರಿ ಅವರ ಕಿರಿಯ ಪುತ್ರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಹತ್ತಾರು ವರ್ಷಗಳಿಂದ ಚಂದ್ರಶೇಖರ್‌, ಪತ್ನಿ ಶಾರದಮ್ಮ, ಹಿರಿಯ ಪುತ್ರ ಪ್ರಶಾಂತ್‌ ಹಾಗೂ ಕಿರಿಯ ಪುತ್ರನ ಜತೆ ಹಳೇ ಬೈಯಪ್ಪನಹಳ್ಳಿ ಯಲ್ಲಿ ವಾಸವಾಗಿದ್ದರು. ಹಿರಿಯ ಪುತ್ರ ಪ್ರಶಾಂತ್‌ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಕಿರಿಯ ಪುತ್ರ ಎಸ್‌ ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಾನೆ. ಕೆಲ ತಿಂಗಳ ಹಿಂದಷ್ಟೇ ಹಿರಿಯ ಪುತ್ರ ಪ್ರಶಾಂತ್‌ಗೆ ಮದುವೆ ಮಾಡಲಾಗಿದ್ದು, ಇಡೀ ಕುಟುಂಬ ಒಟ್ಟಾಗಿ ವಾಸವಾಗಿತ್ತು. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಅತ್ತೆ-ಮಾವ ಮತ್ತು ಸೊಸೆ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು.

ಜತೆಗೆ ಪತಿ ಪ್ರಶಾಂತ್‌ ಕೂಡ ಮದ್ಯ ವ್ಯಸನಿಯಾಗಿದ್ದ. ಅದರಿಂದ ಬೇಸರಗೊಂಡಿದ್ದ ಸೊಸೆ, ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹಿರಿಯರು ರಾಜಿ-ಸಂಧಾನ ಮಾಡಿದ್ದರು. ಆದರೂ ಆಕೆ ಮನೆಗೆ ಬರಲು ಒಪ್ಪಲಿಲ್ಲ. ಈ ನಡುವೆ, ಪತಿ ಪ್ರಶಾಂತ್‌ಗೆ ಬೇರೆ ಮನೆ ಮಾಡುವಂತೆ ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಘಟನೆಯಿಂದ ಸಂಬಂಧಿಕರು ಹಾಗೂ ಅಕ್ಕ-ಪಕ್ಕದವರು ಅವಮಾನ ಮಾಡುತ್ತಾರೆ. ಎಲ್ಲರ ಎದುರು ಮರ್ಯಾದೆ ಹೋಯಿತು ದಂಪತಿ ಬೇಸರಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದಂಪತಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಇಬ್ಬರು ಮಕ್ಕಳು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಣೆಯಲ್ಲಿ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡರೆ, ಚಂದ್ರಶೇಖರ್‌ ಮನೆಯ ಮಧ್ಯದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಕಿರಿಯ ಪುತ್ರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

Advertisement

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಬಳಿಕ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯಲ್ಲಿ ಬಿಎನ್‌ಎಸ್‌ ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next