Advertisement

ಕುಣಿಗಲ್ : ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ; ಪೋಷಕರ ಪ್ರತಿಭಟನೆ

11:25 AM Jul 30, 2022 | Team Udayavani |

ಕುಣಿಗಲ್: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ತೆರೆದಕುಪ್ಪೆ ಗ್ರಾಮಸ್ಥರು ಸರ್ಕಾರಿ ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿ ಆಸ್ಪತ್ರೆ ಆಡಳಿತಾಧಿಕಾರಿ ಗಣೇಶ್ ಬಾಬು ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಶನಿವಾರ ನಡೆಯಿತು.

Advertisement

ತಾಲೂಕಿನ ಕೊತ್ತಗೆರೆ ಹೋಬಳಿ ತೆರೆದಕುಪ್ಪೆ ಗ್ರಾಮದ ಮಹಿಳೆ ಪಲ್ಲವಿ (21) ಮೃತ ಬಾಣಂತಿ.

ಘಟನೆ ವಿವರ : ಜುಲೈ 6ರಂದು ಪಲ್ಲವಿ ಎಂಬವರನ್ನು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರೊಬ್ಬರು ಹಣ ನೀಡಿದರೆ ಮಾತ್ರ ಹೆರಿಗೆ ಮಾಡುವುದು ಎಂದು ಆಕೆಯ ಪೋಷಕರಲ್ಲಿ ಹಣದ ಬೇಡಿಕೆ ಇಟ್ಟಿದ್ದರು. ಬಳಿಕ ಆಕೆಯ ಪತಿ ಹಣ ನೀಡಿದ ನಂತರ ಅಲ್ಲಿನ ವೈದ್ಯರು ಸಾಮಾನ್ಯ ಹೆರಿಗೆ ಮಾಡಲು ಸಾಧ್ಯವಿಲ್ಲ ಎಂದು ಸಿಸೇರಿಯನ್‌ ಹೆರಿಗೆ ಮಾಡಿದ್ದಾರೆ. ಈ ಸಂದರ್ಭ ಬಾಣಂತಿಗೆ ತೀವ್ರ ರಕ್ತ ಸ್ರಾವವಾಗಿ ತೀರ ಅಸ್ವಸ್ಥ ಸ್ಥಿತಿಗೆ ತಲುಪಿದ್ದರು. ಈ ವೇಳೆ ಅಲ್ಲಿನ ವೈದ್ಯರೇ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಬಳಿಕ ಬೆಂಗಳೂರಿನ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ(ಜು.29) ಬಾಣಂತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರೇ ನೇರ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ದಾಂಧಲೆಗೆ ಯತ್ನ: ಆಕ್ರೋಶಗೊಂಡ ಪಲ್ಲವಿಯ ಪೋಷಕರು ಆಸ್ಪತ್ರೆ ಒಳ ನುಗ್ಗಿ ದಾಂಧಲೆಗೆ ಯತ್ನಿಸಿದ್ದು, ಪೊಲೀಸರ ಮಧ್ಯ ಪ್ರವೇಶದಿಂದಾಗಿ ಅನಾಹುತ ತಪ್ಪಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next