Advertisement

ಮೋಟ್ನಳ್ಳಿ ಮೊರಾರ್ಜಿ ಶಾಲಾ ಸಮಸ್ಯೆಗೆ ಮುಕ್ತಿ

06:44 PM Feb 24, 2021 | Team Udayavani |

ಯಾದಗಿರಿ: ಅವ್ಯವಸ್ಥೆಯ ಆಗರವಾಗಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳ ಸಮಸ್ಯೆಗಳಿಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣಕುಮಾರ ಕಲ್ಗದ್ದೆ ಮುಕ್ತಿ ದೊರೆಕಿಸಿದ್ದಾರೆ.

Advertisement

ಯಾದಗಿರಿ ಜಿಲ್ಲೆಯ ಮೋಟ್ನಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆ ಕಳೆದ ಕೆಲವು ವರ್ಷಗಳಿಂದಲೂ ಮೂಲ ಸೌಕರ್ಯಗಳೇ ಇಲ್ಲದೇ ತತ್ತರಿಸಿ ಹೋಗಿತ್ತು. ಶಾಲೆಯ ಒಳಹೊಕ್ಕರೆ ಸಾಕು ಅಲ್ಲಿ ಯಾವುದೇ ಮೂಲ ಸೌಕರ್ಯಗಳೂ ಇರಲಿಲ್ಲ. ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ವಿದ್ಯಾರ್ಥಿಗಳು ಕತ್ತಲೆಯಲ್ಲಿಯೇ ಕಾಲ
ಕಳೆಯುತ್ತಿದ್ದರು. ಶೌಚಾಲಯ ಸಂಪೂರ್ಣವಾಗಿ ದುಸ್ಥಿತಿಗೆ ತಲುಪಿದ್ದು ವಿದ್ಯಾರ್ಥಿಗಳು ಬಯಲು ಶೌಚವನ್ನೇ ನೆಚ್ಚಿಕೊಂಡಿದ್ದರು. ಶಾಲಾ ಮೇಲ್ಛಾವಣೆ ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ಸೋರುತ್ತಿರುವುದು ಹೇಗೆ ಸಾಲು ಸಾಲು ಸಮಸ್ಯೆಗಳಿದ್ದವು.

ಅರುಣಕುಮಾರ ಅವರು ಇತ್ತೀಚೆಗೆ ಮೋಟ್ನಳ್ಳಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಅವರ ಗಮನಕ್ಕೆ ತಂದಿದ್ದರು. ಅಧ್ಯಕ್ಷರು, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಶಾಲೆಯ ಸಮಸ್ಯೆಯನ್ನು ಪರಿಹರಿಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಗಮನಕ್ಕೆ ಬರುತ್ತಿದ್ದಂತೆಯೇ ಶೀಘ್ರದಲ್ಲಿಯೇ ಶಾಲೆಯನ್ನು ದುರಸ್ತಿ ಸರಿಪಡಿಸುವಂತೆ ಆದೇಶಿಸಿದ್ದರು. ಅಲ್ಲದೇ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಸುಮಾರು 240 ವಿದ್ಯಾರ್ಥಿಗಳನ್ನು ಇದೀಗ ತಾತ್ಕಾಲಿಕವಾಗಿ ಸಮೀಪದ ಬಂದಳ್ಳಿಯಲ್ಲಿರುವ ಏಕಲವ್ಯ ಶಾಲೆಗೆ ಸ್ಥಳಾಂತರ ಮಾಡುವ ಕಾರ್ಯ ಆರಂಭವಾಗಿದೆ. ಆಯೋಗದ ಸದಸ್ಯ ಅರುಣಕುಮಾರ ಅವರೊಂದಿಗೆ ಬಿಜೆಪಿ ಮುಖಂಡ ಕುಮಾರ ಟಿಎಂಬಿ ಬಳಿಚಕ್ರ ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next