Advertisement

ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ಆಂದೋಲನ

02:25 PM Jun 09, 2019 | Team Udayavani |

ಗಂಗಾವತಿ: ಸರಕಾರದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಸೇರ್ಪಡೆ ಮಾಡುವ ಮೂಲಕ ಪೂರ್ವ ಪ್ರಾಥಮಿಕ ಶಿಕ್ಷಣ ಕೊಡಿಸುವಂತೆ ಅಂಗನವಾಡಿ ಕಾರ್ಯಕರ್ತೆ ಅಮೀನಾಬೇಗಂ ಹೇಳಿದರು.

Advertisement

ಅವರು ನಗರದ 8ನೇ ವಾರ್ಡ್‌ ಸಂತೆ ಬಯಲು ಅಂಗನವಾಡಿ ಕೇಂದ್ರದ ಪ್ರಚಾರ ಆಂದೋಲನ ಜಾಥಾದಲ್ಲಿ ಮಾತನಾಡಿದರು.

ಸರಕಾರ ಶಿಶು ಅಭಿವೃದ್ಧಿ ಯೋಜನೆಯಡಿ ಹಲವು ಸೌಲಭ್ಯ ನೀಡುತ್ತಿದ್ದು, ಮಕ್ಕಳನ್ನು ಖಾಸಗಿ ಸಂಸ್ಥೆಗಳಿಗೆ ಕಳಿಸದೇ ಶಿಶುಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕಳಿಸುವಂತೆ ಮನವಿ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಅನ್ನಪೂರ್ಣ, ಸಹಾಯಕಿ ಬಡಿಮ್ಮ ಸೇರಿ ವಾರ್ಡಿನ ಮಹಿಳೆಯರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next