Advertisement

Noida: ಚಲಿಸುತ್ತಿದ್ದ A/C ಬಸ್‌ ಗೆ ಬೆಂಕಿಹೊತ್ತಿಕೊಂಡು ಭಸ್ಮ- ಪ್ರಯಾಣಿಕರು ಅಪಾಯದಿಂದ ಪಾರು

04:55 PM Nov 15, 2023 | Team Udayavani |

ನವದೆಹಲಿ: ನೋಯ್ಡಾ ಮತ್ತು ಗ್ರೇಟರ್‌ ನೋಯ್ಡಾ ಸಂಪರ್ಕಿಸುವ ಬಸ್‌ ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನೋಯ್ಡಾ ಎಕ್ಸ್‌ ಪ್ರೆಸ್‌ ನಲ್ಲಿ ನಡೆದಿದ್ದು, ಭೀತಿಗೊಳಗಾದ ಪ್ರಯಾಣಿಕರು ಕ್ಷಿಪ್ರವಾಗಿ ಬಸ್‌ ನಿಂದ ಹೊರಹಾರುವ ಮೂಲಕ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.

Advertisement

ಇದನ್ನೂ ಓದಿ:Bhatkal: ದೆಹಲಿಯಲ್ಲಿ ರಾಷ್ಟ್ರಪತಿಯವರನ್ನು ಭೇಟಿಯಾದ ಭಟ್ಕಳ ಸ್ನೇಹ ವಿಶೇಷ ಶಾಲೆಯ ತಂಡ

ಘಟನೆ ಬಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಬಳಿಕ ಉಳಿದ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದರು. ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದರು ಎಂದು ವರದಿ ಹೇಳಿದೆ.

ಹವಾನಿಯಂತ್ರಿತ ಬಸ್‌ ಅಗ್ನಿ ಅನಾಹುತದಿಂದ ಸಂಪೂರ್ಣವಾಗಿ ಭಸ್ಮಗೊಂಡಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಶಾರ್ಟ್‌ ಸರ್ಕ್ಯೂಟ್‌ ನಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಆದರೆ ಚಲಿಸುತ್ತಿದ್ದ ಬಸ್‌ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನೋಯ್ಡಾ ಎಕ್ಸ್‌ ಪ್ರೆಸ್‌ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next