Advertisement

ಸಂಸದ ಅನಂತಕುಮಾರ್‌ ಹೆಗಡೆ ವಜಾಕ್ಕೆ ಒತ್ತಾಯ 

05:05 PM Dec 27, 2017 | Team Udayavani |

ಮೈಸೂರು: ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರನ್ನು ಸಂಸದ ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ(ಜಿಲ್ಲಾ) ಕಾಂಗ್ರೆಸ್‌ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ವಿಶ್ವಜಾnನಿ ಅಂಬೇಡ್ಕರ್‌ ಅವರು ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತಕ್ಕೆ ಅರ್ಪಣೆ ಮಾಡಿದ್ದಾರೆ. ಇದರಿಂದಾಗಿ ಭಾರತ ಜಾಗತಿಕ ಮಟ್ಟದಲ್ಲಿ ಹಿರಿಮೆ ಪಡೆಯುವಂತೆ ಮಾಡಿದೆ. ಆದರೆ, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ನಿಟ್ಟಿನಲ್ಲಿ ದೇಶದ ಸಂವಿಧಾನ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜವನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ರನ್ನು ಕೇವಲ ಒಂದು ಕೋಮಿಗೆ ಸೀಮಿತಗೊಳಿಸಿ, ಭಾವನಾತ್ಮಕವಾಗಿ ಪ್ರಚೋದಿಸುವ ಪಟ್ಟಭದ್ರ ಹಿತಾಸಕ್ತರು ಕೋಮು ಭಾವನೆಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು.

ಭಾರತದ ಸಂವಿಧಾನದ ಕುರಿತು ಪ್ರಚೋದನೆಕಾರಿಯಾಗಿ ಕೀಳುಮಟ್ಟದ ಹೇಳಿಕೆ ನೀಡಿರುವ ಸಚಿವ ಅನಂತಕುಮಾರ್‌ ಹೆಗಡೆ ಅವರನ್ನು ಗಡಿಪಾರು ಮಾಡಿ, ಸಂಸದ ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಮನವಿ ಮಾಡಿದರು.

ಮಾಜಿ ಮೇಯರ್‌ ಪುರುಷೋತ್ತಮ್‌, ಜಿಲ್ಲಾಧ್ಯಕ್ಷ ಆರ್‌.ಸುನಂದಕುಮಾರ್‌, ನಾರಾಯಣಸ್ವಾಮಿ, ಭಾಸ್ಕರ್‌, ಜಗದೀಶ್‌, ನರಸಿಂಹ, ಉದಯಕುಮಾರ್‌, ಇಂದಿರಾ, ಶೋಭಾ, ಜಯಪ್ರಭಾ, ರಮೇಶ್‌, ರಾಣಿಪ್ರಭಾ, ಬಿ.ಪ್ರಕಾಶ್‌ ಮತ್ತಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next