Advertisement

ಶಿವಮೊಗ್ಗ ಶಾಂತ ಸ್ಥಿತಿಯತ್ತ ಬರುತ್ತಿದೆ: ಸಂಸದ ಬಿ.ವೈ. ರಾಘವೇಂದ್ರ

09:27 PM Feb 27, 2022 | Team Udayavani |

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆ ನಂತರ ಶಿವಮೊಗ್ಗ ಶಾಂತ ಸ್ಥಿತಿಯತ್ತ ಬರುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Advertisement

ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸರ್ವಜನಾಂಗದ ಶಾಂತಿಯ ತೋಟವಾದ ಶಿವಮೊಗ್ಗ ಸಹಜ ಸ್ಥಿತಿಗೆ ಬರುತ್ತಿದೆ. ರಾಜ್ಯದಲ್ಲಿ ಹಿಂದೂ ಪರ ಮಾತನಾಡಿ, ಧರ್ಮದ ಪರ ಧ್ವನಿ ಎತ್ತಿದವರ ಕಗ್ಗೊಲೆಗಳು ನಡೆಯುತ್ತಿದೆ. ಮುಂದೆ ಈ ರೀತಿಯಾಗದಂತೆ ಎಚ್ಚೆತ್ತು ಕೊಳ್ಳುತ್ತೇವೆ. ಬಹುಸಂಖ್ಯಾತರು ತಮ್ಮ ಭಾವನೆ ವ್ಯಕ್ತ ಪಡಿಸಿದಾಗ ಈ ರೀತಿಯಾಗುತ್ತಿದೆ. ಇನ್ನು ಮುಂದೆ ಈ ರೀತಿ ಕಗ್ಗೊಲೆಯಾಗದಂತೆ ಬಿಜೆಪಿ ಸರ್ಕಾರ ನೋಡಿಕೊಳ್ಳುತ್ತದೆ.

ಹರ್ಷನ ಕೊಲೆ ಆರೋಪಿಗಳ ಮೇಲೆ ಹಲವಾರು ಪ್ರಕರಣಗಳಿವೆ. ಜಾಮೀನಿನ ಮೇಲೆ ಹೊರಗೆ ಬಂದು ಮತ್ತೆ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಯಾಕೆ ಅವರ ರಕ್ಷಣೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next