Advertisement

ಸಿಎಂ ಜನ್ಮದಿನ: ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ

04:43 PM Feb 28, 2021 | Team Udayavani |

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ವಿಧಾನ ಪರಿಷತ್‌  ಸದಸ್ಯ ರುದ್ರೇಗೌಡರ ನೇತೃತ್ವದಲ್ಲಿ ಶನಿವಾರ ರವೀಂದ್ರನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಮಾರ್ಚ್‌ 8ರಂದು ಯಡಿಯೂರಪ್ಪ ಬಜೆಟ್‌ ಮಂಡಿಸಲಿದ್ದು ಈ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಅಲ್ಲದೆ ಸುಸ್ಥಿರ ಆಡಳಿತ, ಅಧಿಕಾರ ಸುಗಮವಾಗಿ ನಡೆಯಲು ಪ್ರಾರ್ಥಿಸಲಾಗಿದೆ ಎಂದರು.

ದಕ್ಷಿಣ ಭಾರತದ ಹೆಮ್ಮೆಯ ನಾಯಕರಾದ ಸಿಎಂ ಯಡಿಯೂರಪ್ಪ ಕಳೆದ 50 ವರ್ಷಗಳಿಂದ ಸುದೀರ್ಘ‌ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಸಂಘಟನೆಯನ್ನು ಬಲಪಡಿಸಿ ಸಮಾಜವಾದಿ ನೆಲೆಯಲ್ಲಿ ರಾಷ್ಟ್ರೀಯ ಸಿದ್ಧಾಂತದೊಂದಿಗೆ ಪಕ್ಷವನ್ನು ಬಲಪಡಿಸಿದ್ದಾರೆ. ಇಡಿ ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ ಅಧಿ ಕಾರಕ್ಕೆ ತಂದಿದ್ದಾರೆ ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿ ಅನೇಕ ಸವಾಲುಗಳನ್ನು ಎದುರಿಸಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next