Advertisement

Baramulla ಪಕ್ಷೇತರ ಸಂಸದ ಇಂಜಿನಿಯರ್ ರಶೀದ್ ಜೈಲಿನಿಂದ ಇಂದು ಬಿಡುಗಡೆ ಸಾಧ್ಯತೆ

11:15 AM Sep 11, 2024 | Team Udayavani |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಸಂಸದ ಇಂಜಿನಿಯರ್ ರಶೀದ್ ರ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 5 ಕ್ಕೆ ಪಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.

Advertisement

ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಸ್ತುತ ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ, ಇದು ಅಕ್ಟೋಬರ್ 2 ರಂದು ಮುಕ್ತಾಯಗೊಳ್ಳಲಿದೆ. ಪರಿಣಾಮವಾಗಿ, ಅವರು ಇಂದು (ಸೆ 11) ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.

ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷ (AIP) ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತಮ್ಮ ಖುರ್ಷಿದ್ ಅಹ್ಮದ್ ಶೇಖ್ ಕೂಡ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲ್ಯಾಂಗಟೆ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ. ಉಗ್ರ ನೆರವು ಪ್ರಕರಣದಲ್ಲಿ 2019 ರಿಂದ ಜೈಲಿನಲ್ಲಿರುವ ರಶೀದ್ ಲಾಂಗೇಟ್ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.ಲೋಕಸಭಾ  ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪ್ರಬಲ ಅಭ್ಯರ್ಥಿ ಒಮರ್ ಅಬ್ದುಲ್ಲಾ ವಿರುದ್ಧ ಗೆಲುವು ಸಾಧಿಸಿ ಗಮನ ಸೆಳೆದಿದ್ದರು.

ಲೋಕಸಭೆಯಲ್ಲಿ ಚುನಾಯಿತ ಸಂಸದ ರಶೀದ್ ಅವರ ಚುನಾವಣ ಪ್ರಚಾರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next