Advertisement

ಸಂಸದ ಗೋಪಾಲ್‌ ಶೆಟ್ಟಿ,ಪ್ರಕಾಶ್‌ ಶೆಟ್ಟಿ ಅವರಿಗೆ ಸಮ್ಮಾನ

03:53 PM Jun 11, 2019 | Team Udayavani |

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಿಂದ ದ್ವಿತೀಯ ಬಾರಿಗೆ ಸಂಸದರಾಗಿ ಭರ್ಜರಿಯಾಗಿ ಜಯಗಳಿಸಿದ ಗೋಪಾಲ್‌ ಸಿ. ಶೆಟ್ಟಿ ದಂಪತಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಂಸ್ಥೆಗೆ ನೂತನ ನಿರ್ದೇಶಕರಾಗಿ ಸೇರ್ಪಡೆಗೊಂಡ ಪ್ರತಿಷ್ಠಿತ ಎಂಆರ್‌ಜಿ ಸಮೂಹದ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಹಾಗೂ ಗೌರವ ಕೋಶಾಧಿಕಾರಿ ಉಳೂ¤ರು ಮೋಹನದಾಸ್‌ ಶೆಟ್ಟಿ ಮತ್ತು ಒಕ್ಕೂಟದ ಪೋಷಕ ಸದಸ್ಯ, ಬಂಟ್ಸ್‌ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌.ಪಯ್ಯಡೆ ಅವರು ಸಮ್ಮಾನಿಸಿದರು.

Advertisement

ರವಿವಾರ ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಸಮಾರಂಭದ ಮಧ್ಯಾಂತರದಲ್ಲಿ ಸಾಧಕರನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಸಚಿವ, ಬಿಜೆಪಿ ಶಾಸಕ ಸಿ. ಟಿ. ರವಿ, ಸುಧೀರ್‌ ವಿ. ಶೆಟ್ಟಿ, ಸುಧಾಕರ್‌ ಎಸ್‌. ಹೆಗ್ಡೆ, ಡಾ| ಸುರೇಂದ್ರ ವಿ. ಶೆಟ್ಟಿ, ಆದಾಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನಿವ್ಯಾ ಪಿ. ಶೆಟ್ಟಿ ಐಆರ್‌ಎಸ್‌, ಬಂಟ್ಸ್‌ ಸಂಘ ಮುಂಬಯಿ ಇದರ ಪದಾಧಿಕಾರಿಗಳಾದ ಚಂದ್ರಹಾಸ ಕೆ. ಶೆಟ್ಟಿ, ಸಿಎ ಸಂಜೀವ ಶೆಟ್ಟಿ, ಪ್ರವೀಣ್‌ ಬಿ. ಶೆಟ್ಟಿ, ಮಹೇಶ್‌ ಎಸ್‌. ಶೆಟ್ಟಿ, ಗುಣಪಾಲ್‌ ಶೆಟ್ಟಿ ಐಕಳ, ರಂಜನಿ ಸುಧಾಕರ್‌ ಹೆಗ್ಡೆ, ಶರತ್‌ ವಿಜಯ್‌ ಶೆಟ್ಟಿ, ಸುಬ್ಬಯ ಎ. ಶೆಟ್ಟಿ, ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ಸುರೇಶ್‌ ಬಿ. ಶೆಟ್ಟಿ ಮರಾಠ, ಅಶೋಕ್‌ ಪಕ್ಕಳ, ಬಂಟರ ಸಂಘದ ಪ್ರಧಾನ ಪ್ರಬಂಧಕ ಪ್ರವೀಣ್‌ ಶೆಟ್ಟಿ ವಾರಂಗ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಚಿತ್ರ – ವರದಿ : ರೋನ್ಸ್‌ ಬಂಟ್ವಾಳ್‌

Advertisement

Udayavani is now on Telegram. Click here to join our channel and stay updated with the latest news.

Next