Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾದ ಕಾರ್ತಿ ಚಿದಂಬರಂ

03:47 PM Oct 18, 2020 | keerthan |

ಬೆಂಗಳೂರು: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪುತ್ರ, ಸಂಸದ, ಉದ್ಯಮಿ ಕಾರ್ತಿ ಚಿದಂಬರಂ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

Advertisement

ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ ಕಾರ್ತಿ ಚಿದಂಬರಂ ಡಿಕೆಶಿ ಜೊತೆ ಚರ್ಚೆ ನಡೆಸಿದರು. ಡಿಕೆಶಿ ಸಹೋದರ, ಸಂಸದ ಡಿ ಕೆ ಸುರೇಶ್ ಕೂಡಾ ಉಪಸ್ಥಿತರಿದ್ದರು.

ಡಿಕೆಶಿ ಮನೆಗೆ ಇತ್ತೀಚೆಗೆ ನಡೆದ ಸಿಬಿಐ ದಾಳಿಯ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ. ಈ ಹಿಂದೆ 2017ರಲ್ಲಿ ಕಾರ್ತಿ ಚಿದಂಬರಂ ಅವರ ಮನೆ ಮೇಲೂ ಸಿಬಿಐ ದಾಳಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next