Advertisement

CM ಹೇಳಿಕೆಗೆ ಪಾಕ್ ನಲ್ಲಿ ಬೆಂಬಲ ವ್ಯಕ್ತವಾಗುತ್ತೆ: ಜೋಶಿ ಆರೋಪ!

03:05 PM Jan 31, 2018 | Team Udayavani |

ಕೊಪ್ಪಳ: ಆರ್ ಎಸ್ಎಸ್, ಭಜರಂಗದಳ ಭಯೋತ್ಪಾದಕ ಸಂಘಟನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸುತ್ತಾರೆ. ಈ ಹೇಳಿಕೆಗೆ ಪಾಕಿಸ್ತಾನದಲ್ಲಿ ಬೆಂಬಲ ವ್ಯಕ್ತವಾಗಿರಬೇಕು. ಪಾಕಿಸ್ತಾನ ಬೆಂಬಲಿಸುವಂತಹ ಇಂತಹ ಮುಖ್ಯಮಂತ್ರಿಯನ್ನು ಕಿತ್ತೊಗೆಯಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

Advertisement

ವೋಟ್ ಬ್ಯಾಂಕ್ ಗಾಗಿ ಸಿಎಂ ಸಿದ್ದರಾಮಯ್ಯ ಏನ್ ಬೇಕಾದ್ರೂ ಮಾಡುತ್ತಾರೆ. ಇದು ಸಿಎಂ ಸಿದ್ದರಾಮಯ್ಯನವರ ಮುಟ್ಟಾಳತನದ ಪರಮಾವಧಿ ಎಂದು ಕಿಡಿಕಾರಿದರು.

ಬುಧವಾರ ಕೊಪ್ಪಳದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕನ್ನಡ ಪಕ್ಷದ ವಾಟಾಳ್ ನಾಗರಾಜ್ ಕಾಂಗ್ರೆಸ್ ಪಕ್ಷದ ಏಜೆಂಟ್. ಕೆಲ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಿಸ್ತಿದ್ದಾರೆ ಎಂದು ದೂರಿದರು.

ಮಹದಾಯಿ ಎಲ್ಲಿ ಹರಿಯುತ್ತದೆ ಎಂಬುದೇ ವಾಟಾಳ್ ಗೆ ಗೊತ್ತಿಲ್ಲ. ಹೋರಾಟಗಾರ ವಾಟಾಳ್ ನಾಗರಾಜ್ ಗೆ ಬುದ್ಧಿ ಇಲ್ಲ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next