Advertisement

ಹರಪನಹಳ್ಳಿಯಲ್ಲಿ ಪಕ್ಷೇತರೆಯಾಗಿ ಜಯಭೇರಿ ಬಾರಿಸಿದ ಎಂಪಿ ಪ್ರಕಾಶ್ ಪುತ್ರಿ

04:08 PM May 13, 2023 | Team Udayavani |

ಹರಪನಹಳ್ಳಿ : ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಲತಾ ಮಲ್ಲಿಕಾರ್ಜುನ ಜಯಭೇರಿ ಬಾರಿಸಿದ್ದಾರೆ.

Advertisement

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉಳಿದ ಅವರು ಬಿಜೆಪಿ ಅಭ್ಯರ್ಥಿ ಶಾಸಕರಾಗಿದ್ದ ಜಿ ಕರುಣಾಕರ ರೆಡ್ಡಿ ಅವರಿಗೆ ಸೋಲಿನ ಶಾಕ್ ನೀಡಿದ್ದಾರೆ. ಲತಾ ಮಲ್ಲಿಕಾರ್ಜುನ ಅವರು 70194 ಮತಗಳನ್ನು ಪಡೆದಿದ್ದಾರೆ. ರೆಡ್ಡಿ 56349 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಕೊಟ್ರೇಶಿ 44408 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.

ಸಂಧಾನಕ್ಕೆ ಬಗ್ಗದೆ ಬಂಡಾಯ ಅಭ್ಯರ್ಥಿಯಾಗಿ ಮುಂದುವರಿದ ಕಾರಣ ಕಾಂಗ್ರೆಸ್ ಪಕ್ಷ ಲತಾ ಮಲ್ಲಿಕಾರ್ಜುನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next