Advertisement

ಎಂ.ಪಿ.ರೇಣುಕಾಚಾರ್ಯ ಆಪ್ತ ಸಿಬ್ಬಂದಿಗೆ ಕೋವಿಡ್ ಸೊಂಕು ದೃಢ

02:15 PM Jul 08, 2020 | Mithun PG |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ  ಆಪ್ತ ಸಿಬ್ಬಂದಿಗೆ ಕೋವಿಡ್ 19 ಸೊಂಕು ಇರುವುದು ದೃಢಪಟ್ಟಿದೆ. ಕಳೆದ ಸೋಮವಾರವಷ್ಟೆ ಕಾಲುನೋವಿಗೆಂದು ಚಿಕಿತ್ಸೆ ಪಡೆಯಲು ಪೋರ್ಟಿಸ್ ಆಸ್ಪತ್ರೆಗೆ ಈ ಸಿಬ್ಬಂದಿ ದಾಖಲಾಗಿದ್ದರು. ಈ ಸಮಯದಲ್ಲಿ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಸೊಂಕು ಇರುವುದು ದೃಢಪಟ್ಟಿದೆ.

Advertisement

ಈ ಬಗ್ಗೆ ಸ್ವತಃ ರೇಣುಕಾಚಾರ್ಯ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೋವಿಡ್19 ಪಾಸಿಟಿವ್ ಪತ್ತೆಯಾಗಿದೆ.ಇಂದಿನಿಂದ ಶುಕ್ರವಾರದ ಸಂಜೆವರೆಗೂ ಬೆಂಗಳೂರಿನ ನನ್ನ ಸರ್ಕಾರಿ ಗೃಹ ಕಚೇರಿಯಲ್ಲಿ ನಾನು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಹಾಗು ನನ್ನ ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ನನ್ನನ್ನ ಸಂಪರ್ಕಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ರಾಜ್ಯಾದ್ಯಂತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೆಲವು ಶಾಸಕರು, ಸಂಸದರು ಹಾಗು ಎಂಎಲ್ ಸಿಗಳಿಗೂ ಕೂಡ ಕೋವಿಡ್-19 ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.  ಸಾರ್ವಜನಿಕರು ಮಾಸ್ಕ್  ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿಯಮಾವಳಿಗಳನ್ನು ಪಾಲಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಮದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next