Advertisement

‘ನಾನೊಬ್ಬ ಸುಸಂಸ್ಕೃತ ರಾಜಕಾರಣಿ’ : ಸಂಸದ ಸದಾನಂದ್ ಗೌಡ

06:24 PM Jul 13, 2021 | Team Udayavani |

ಮೈಸೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಕೆಲ ರಾಜ್ಯಗಳ ಮುಂದಿನ ಚುನಾವಣೆಯ ಸಂಘಟನಾ ದೃಷ್ಟಿಯಿಂದ ರಾಜಿನಾಮೆ ಕೇಳಿದ್ರು. ತಕ್ಷಣ ರಾಜೀನಾಮೆ ನೀಡಿದ್ದೇವೆ ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಸದಾನಂದ್ ಗೌಡ ಹೇಳಿದರು.

Advertisement

ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ‌..! ನನಗೆ ಪಕ್ಷ ಕೊಟ್ಟಂತಹ ಅವಕಾಶಗಳು ಬಹುಶಃ ರಾಜ್ಯದಲ್ಲಿ ಯಾರಿಗೂ ಸಿಕ್ಕಿಲ್ಲ. ನಾನೊಬ್ಬ ಸುಸಂಸ್ಕೃತ ರಾಜಕಾರಣಿ. ಅಧಿಕಾರ ಕೊಟ್ಟಾಗ ಎತ್ತರಕ್ಕೆ ಏರುವುದು, ಕೊಡದಿದ್ದಾಗ ಕೆಳಕ್ಕೆ ಇಳಿಯುವು ಮಾಡಬಾರದು. ಸಮಾನ ಮನಸ್ಸಿನಲ್ಲಿ ಸ್ವೀಕರಿಸಿ ಮುಂದೆ ನಡೆಯಬೇಕು ಎಂದರು.

ಇನ್ನು ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಇದು ಪಕ್ಷದ ಸಂಘಟನೆ ವಿಚಾರ. ನಮ್ಮ ಪಕ್ಷ ಬೆಳೆಯಬೇಕು ಅಂದ್ರೆ ಇತರ ಪಕ್ಷದಿಂದ ಬಂದವರೂ ಸಿದ್ದಾಂತ ಒಪ್ಪಿಕೊಳ್ಳಬೇಕು. ಹೊರಗಿನಿಂದ ಬಂದವರನ್ನ ಸ್ಟ್ರೀಮ್ ಲೈನ್ ಮಾಡುವ ಅವಶ್ಯಕತೆ ಇದೆ. ಪಕ್ಷ ಆ ದಾರಿಯಲ್ಲಿ ಕೆಲಸ ಮಾಡ್ತಿದೆ ಎಂದರು.

ರಾಜೀನಾಮೆ ವಿಚಾರವಾಗಿ ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರಿಸಿದ ಸದಾನಂದ್ ಗೌಡ, ರಾಜಕೀಯ ಅಂದ್ರೆ ದೊಡ್ಡ ಸಮುದ್ರ ಇದ್ದಂತೆ.ಸಮುದ್ರ ಸ್ನಾನಕ್ಕೆ ಇಳಿದರು ಅಲೆಗಳಿಗೆ ಕಾಯಬಾರದು. ರಾಜಕೀಯದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ನಮ್ಮ ಕಾರ್ಯಾಚರಣೆ, ಕಮಿಟ್ಮೆಂಟ್ ಮೂಲಕ ಉತ್ತರ ಕೊಡಬೇಕು. ನಾನು ಏರ್ಪೋರ್ಟ್ಗೆ ಬಂದಾಗ ಸ್ವಾಗತ ಮಾಡೊಕೆ ನಾಲ್ಕು ಸಾವಿರ ಜನ ಬಂದಿದ್ರು.ಇದಕ್ಕಿಂತ ದೊಡ್ಡ ಸಂಪಾದನೆ ಏನಿದೆ, ಎಲ್ಲಾ ಟೀಕೆಗೆಗೂ ಇದೇ ಉತ್ತರ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next