Advertisement

ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿ ತರಹ ಮಾತಾನಾಡುವುದು ಸರಿಯಲ್ಲ : ಸುಮಲತಾ ಅಂಬರೀಶ್

07:40 PM Nov 16, 2020 | Suhan S |

ಬೆಂಗಳೂರು: ಪ್ರತಾಪ್‌ಸಿಂಹ ಅವರು ಪಕ್ಕದ ಕ್ಷೇತ್ರದ ಸಂಸದರು. ಎರಡು ಬಾರಿ ಸಂಸದರಾಗಿರುವವರು, ಮಾತಾನಾಡುವಾಗ ಅರಿತುಕೊಂಡು ಮಾತನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದರು.

Advertisement

ಸಿಎಂ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತಾನಾಡಿದ ಸಂಸದೆ ಸುಮಲತಾ ಅಂಬರೀಶ್ , ಪ್ರತಾಪ್‌ಸಿಂಹ ಮೈಸೂರು- ಕೊಡಗು ಸಂಸದರು. ಎರಡು ಬಾರಿ ಸಂಸದರಾಗಿದ್ದಾರೆ.ಅವರು ಯಾವುದೇ ವಿಷಯವನ್ನು ಮಾತಾನಾಡುವಾಗ ಅದನ್ನು ಅರಿತುಕೊಂಡು ಮಾತಾನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದೆಂದು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದರು.

ಮೈಸೂರು ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಆಗಿದೆ ಎಂದು ನನಗೂ ಗೊತ್ತಿದೆ. ಕೊಡಗು ಭಾಗಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವ ದೂರು ನಮಗೂ ಬಂದಿದೆ. ಅಂಬರೀಶ್ ಇದ್ದಾಗ ಯಾರಿಗೂ ಧೈರ್ಯ ಇರಲಿಲ್ಲ. ಅಂಬರೀಶ್ ಇದ್ದಾಗ ಇಂತಹ ಮಾತುಗಳನ್ನು ಯಾರು ಆಡುತ್ತಿರಲಿಲ್ಲ.  ಇಂದು‌ ಅಂಬರೀಶ್ ಇಲ್ಲ. ಹೀಗಾಗಿ, ಅವರೆಲ್ಲಾ ಮಾತನ್ನಾಡುತ್ತಿದ್ದಾರೆ ಎಂದರು.

ಅವರು ಪಕ್ಕದ ಕ್ಷೇತ್ರದ ಸಂಸದರು. ನಮ್ಮ ಕ್ಷೇತ್ರದ ಬಗ್ಗೆ ಅವರು ಮಾತನಾಡುವುದು ಸರಿಯಲ್ಲ. ಒಬ್ಬ ಸಂಸದರಾಗಿ, ಇನ್ನೊಬ್ಬ ಸಂಸದರ ಬಗ್ಗೆ ಮಾತನಾಡಲು ಹಕ್ಕಿಲ್ಲ.  ಸಂಸದರು ಸಂಸದರ ಭಾಷೆ ಬಳಸಿ ಮಾತನ್ನಾಡಿದ್ರೆ ಸರಿ, ಅವರು ಪೇಟೆ ರೌಡಿ ರೀತಿಯಲ್ಲಿ ಮಾತನ್ನಾಡಿದ್ರೆ ನಾನು ಉತ್ತರ ನೀಡುವುದಿಲ್ಲ. ಅವರು ಕೊಟ್ಟ ಹೇಳಿಕೆಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಜಿಲ್ಲೆಯ ಜನ ಉತ್ತರ ಕೊಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next