Advertisement

‘ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ’

01:02 PM Jul 11, 2021 | Team Udayavani |

ಬೆಂಗಳೂರು : ಮಾಜಿ ಸಿಎಂ ಕುಮಾರ ಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ನಡುವಿನ ವಾಗ್ಯುದ್ಧ ಮುಂದುವರೆದಿದೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಸುಮಲತಾ ಪರೋಕ್ಷವಾಗಿ ಹೆಚ್ ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

Advertisement

‘ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ ಎಂದು ಎಚ್‌ಡಿ ಕುಮಾರಸ್ವಾಮಿ ಹಾಗೂ ದಳಪತಿಗಳಿಗೆ ಪರೋಕ್ಷವಾಗಿ ಸುಮಲತಾ ಅಂಬರೀಶ್ ತಿವಿದಿದ್ದಾರೆ. ಈ ಮೂಲಕ ಸುಮಲತಾ ಅಂಬರೀಶ್ ವಿರುದ್ಧ ವೈಯಕ್ತಿಕ ದಾಳಿಗಿಳಿದವರಿಗೆ ಟ್ವಿಟ್ಟರ್‌ನಲ್ಲಿ ಉತ್ತರ ಕೊಟ್ಟಿದ್ದಾರೆ.

ಮತ್ತೊಂದು ಕಡೆಯಲ್ಲಿ ಕುಮಾರಸ್ವಾಮಿ ಸದ್ಯ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಟ್ವೀಟ್‌ ಮೂಲಕ ಯಾವುದೇ ಹೇಳಿಕೆಗಳನ್ನು ನೀಡದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಮನವಿ ಮಾಡಿದ್ದಾರೆ.

ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ,ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಗಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದಿದ್ದಾರೆ. ಒಟ್ಟಿನಲ್ಲಿ ಇಬ್ಬರ ನಡುವಿನ ಈ ಯುದ್ಧ ಸದ್ಯಕ್ಕೆ ಮುಗಿದ ಹಾಗೆ ಕಾಣುತ್ತಿಲ್ಲ. ಎಚ್‌ಡಿಕೆ ಹೇಳಿಕೆಯಿಂದ ಶುರುವಾರ ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂಬುವುದು ಸದ್ಯದ ಕುತೂಹಲ.

ಇನ್ನು ಸುಮಲತಾ ಪರವಾಗಿ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಸಿನಿಮಾ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಕುಮಾರ ಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next