Advertisement

ಮಧ್ಯಪ್ರದೇಶದಲ್ಲಿ ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ:ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

12:57 PM Nov 18, 2020 | sudhir |

ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಹೇಳಿದ್ದಾರೆ.

Advertisement

ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋವು ಸಚಿವಾಲಯದ ಒಂದು ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.

ಈ ಕುರಿತು ಮಧ್ಯ ಪ್ರದೇಶ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದು ರಾಜ್ಯದಲ್ಲಿ ಗೋವುಗಳ ರಕ್ಷಣೆ ಮಾಡಬೇಕಾಗಿದೆ ಹಾಗಾಗಿ ಪ್ರತ್ಯೇಕ ಸಚಿವಾಲಯ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದ್ದಾರೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next