Advertisement

ಲಾಟರಿಯಲ್ಲಿ ಒಲಿದ ಅದೃಷ್ಟ: ಭಕ್ತರಹಳ್ಳಿ MPCSನಲ್ಲಿ ಮತ್ತೊಮ್ಮೆ ಜೆಡಿಎಸ್‍ಗೆ ಅಧಿಕಾರ

06:16 PM Dec 08, 2020 | sudhir |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯೊಬ್ಬರಿಗೆ ಲಾಟರಿಯಲ್ಲಿ ಅಧ್ಯಕ್ಷರ ಸ್ಥಾನ ಒಲಿದು ಬಂದಿದ್ದು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷದ ಪಾಲಾಗಿದೆ.

Advertisement

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಬಿಟಿ ನಾಗೇಶ್ ಹಾಗೂ ಜೆಡಿಎಸ್ ಪಕ್ಷದಿಂದ ಬಿಎನ್ ವಿಜಯ್‍ಕುಮಾರ್ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಕೋಟೆ ಬಿಕೆ ಚನ್ನೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ರುಕ್ಮಿಣಿಯಮ್ಮ ನಾಮಪತ್ರವನ್ನು ಸಲ್ಲಿಸಿದರು.

ಚುನಾವಣೆಯ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಎನ್ ವಿಜಯ್‍ಕುಮಾರ್ ಮತ್ತು ಬಿಟಿ ನಾಗೇಶ್ ಪರವಾಗಿ ತಲಾ 06 ಮತಗಳು ಬಂದಿದವು ಒಂದು ಮತ ತಿರಸ್ಕೃತಗೊಂಡಿತು ಈ ಹಿನ್ನೆಲೆಯಲ್ಲಿ ನಡೆದ ಲಾಟರಿ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಬಿಎನ್ ವಿಜಯ್‍ಕುಮಾರ್ ಅವರಿಗೆ ಅದೃಷ್ಟ ಲಕ್ಷ್ಮಿ ಒಲಿದು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೋಟೆ ಬಿಕೆ ಚನ್ನೇಗೌಡ ಅವರಿಗೆ 07 ಮತಗಳು ಬಂದಿದ್ದು ಅವರು ತಮ್ಮ ಸಮೀಪದ ಸ್ಪರ್ಧಿ ರುಕ್ಮಿಣಿಯಮ್ಮ ಅವರನ್ನು ಒಂದು ಮತದ ಅಂತರದಿಂದ ಪರಾಭವಗೊಳಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಇದನ್ನೂ ಓದಿ:ಕೇಂದ್ರ v/s ರೈತರ ಬಿಕ್ಕಟ್ಟು ಅಂತ್ಯವಾಗುತ್ತಾ? 7ಗಂಟೆಗೆ ರೈತ ಮುಖಂಡರ ಜತೆ ಶಾ ಚರ್ಚೆ

ಇತ್ತೀಚೆಗೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರು 07 ನಿರ್ದೇಶಕರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತರು 05 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದರು (ಒಬ್ಬರು ಅವಿರೋಧ ಆಯ್ಕೆ ಹೊರತುಪಡಿಸಿ). ಇದರಿಂದ ಕಳೆದ 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ಲಕ್ಷಣಗಳು ಕಂಡು ಬಂದಿತು ಆದರೆ ಇಂದು ನಡೆದ ಚುನಾವಣೆಯಲ್ಲಿ ಲಾಟರಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯೊಬ್ಬರಿಗೆ ಅದೃಷ್ಟ ಒಲಿದು ಬಂದಿದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇದರಿಂದ 15 ವರ್ಷದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯುವ ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಿದೆ.

Advertisement

ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಬಹುದೆಂಬ ಲೆಕ್ಕಾಚಾರ ಉಲ್ಟಾವಾಗಿದ್ದು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತರಿಗೆ ಮತದಾನ ಮಾಡಿದ ಹಿನ್ನಲೆಯಲ್ಲಿ ಅವರ ಮತವನ್ನು ಚುನಾವಣಾಧಿಕಾರಿ ಬಿಎನ್ ಲೀಲಾವತಿ ಅವರು ತಿರಸ್ಕøತಗೊಳಿಸಿದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಲಾ 06 ಮತಗಳು ಪಡೆದಿರುವುದರಿಂದ ಚುನಾವಣಾಧಿಕಾರಿ ಲಾಟರಿ ಪ್ರಕ್ರಿಯೆ ನಡೆಸಿದರು ಅದರಲ್ಲಿ ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಜೆಡಿಎಸ್ ಕಾರ್ಯಕರ್ತರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು ನೂತನ ಅಧ್ಯಕ್ಷ ವಿಜಯ್‍ಕುಮಾರ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದ್ದು ತಮ್ಮ ಅವಧಿಯಲ್ಲಿ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಹೇಳಿ ಎಲ್ಲಾ ಹಾಲು ಉತ್ಪಾದಕರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಪಿಸಿಎಸ್ ನಿರ್ದೇಶಕರಾದ ಎಸಿ ಚಂದ್ರಶೇಖರ್, ಕೆಸಿ ಕೇಶವಮೂರ್ತಿ, ಸು. ನಾರಾಯಣಸ್ವಾಮಿ, ರುಕ್ಮಿಣಿಯಮ್ಮ, ಭಕ್ತರಹಳ್ಳಿ ಯುವ ಮುಖಂಡರಾದ ಛಲವಾದಿ ಆನಂದ್, ಭಕ್ತರಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್‍ಎನ್ ವೆಂಕಟೇಶ್, ಮಳ್ಳೂರು ಎಸ್‍ಎಫ್‍ಸಿಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಎಸ್ ನಾರಾಯಣಸ್ವಾಮಿ, ಜೆವಿ.ಮುನಿರಾಜು, ಮಂಜುನಾಥ್, ರಘುರಾಜ್, ಎಂಪಿಸಿಎಸ್ ಮಂಜು ರವಿಚಂದ್ರ,ಹಾಲು ಪರಿವೀಕ್ಷಕ ಅಶೋಕ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next