Advertisement
ಪ್ರವಾಹದಿಂದ ರಾಜ್ಯಕ್ಕೆ 35,500 ಕೋಟಿ ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದರೂ, ಕೇಂದ್ರ ಸರ್ಕಾರ ಕೇವಲ 1,869 ಕೋಟಿ ರೂ.ಗಳನ್ನು ಮಾತ್ರ ನೀಡಿದೆ. ಆದರೆ ಪೂರ್ಣ ಪರಿಹಾರ ಸಿಗದೇ ಜನರು ಇಂದಿಗೂ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು.
Related Articles
Advertisement
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದೆ. ಯೋಜನೆಗಳು ಸ್ಥಗಿತಗೊಂಡಿದ್ದು, ವಿದ್ಯಾರ್ಥಿ ವೇತನ ನೀಡಿಲ್ಲ, ಇಂದಿರಾ ಕ್ಯಾಂಟಿನ್ ಮುಚ್ಚುವ ಯತ್ನ ನಡೆಸುತ್ತಿದ್ದಾರೆ. ರೈತರಿಂದ ಬಲವಂತವಾಗಿ ಸಾಲ ವಸೂಲಿಗೆ ಮುಂದಾಗುತ್ತಿದ್ದಾರೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ದೂರಿದರು.
ಮಂಗಳೂರಿನಲ್ಲಿ ಗೋಲಿಬಾರ್, ಚಿಕ್ಕ ಮಗಳೂರು ಸಾಹಿತ್ಯ ಸಮ್ಮೇಳನಕ್ಕೆ ಬಾಂಬ್ ಬೆದರಿಕೆ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ, ಬೆಂಗಳೂರಿನಲ್ಲಿ ಚರ್ಚ್ ಮೇಲೆ ದಾಳಿ ಈ ಎಲ್ಲವೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದಕ್ಕೆ ತಾಜಾ ಉದಾಹರಣೆಯಾಗಿದೆ ಎಂದರು.
ಈಗ ಅಧಿಕಾರ ನಡೆಸುತ್ತಿರುವ ಸರ್ಕಾರದ ಮಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಕೆಳಗಿಸಲು ಗುಪ್ತ ಸಭೆಗಳು, ಪತ್ರ ವ್ಯವಹಾರಗಳು ನಡೆಯುತ್ತಿವೆ, ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಮರುಕ್ಷಣವೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಿದ್ದು ಹೋಗಲಿದೆ. ಇದು ಸುಭದ್ರವಿಲ್ಲದ ಸರ್ಕಾರವೆಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ರಾಜ್ಯ ಕಾಂಗ್ರೆಸ್ ವಕ್ತಾರ ಮುರುಳಿಧರ್ ಹಾಲಪ್ಪ, ಅಧ್ಯಕ್ಷ ಆರ್.ರಾಮಕೃಷ್ಣ, ಜಿಪಂ ಸದಸ್ಯ ಕೆಂಚಮಾರಯ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಮೇಯರ್ ಗೀತಾ ರುದ್ರೇಶ್, ಜಿಲ್ಲಾ ವಕ್ತಾರ ಕೆ.ಎಂ ಸುಜಾತಾ, ಮುಖಂಡ ಆರ್.ನಾರಾಯಣ್, ಪುಟ್ಟರಾಜು ಸೇರಿದಂತೆ ಇತರರಿದ್ದರು.