Advertisement

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಟಿಕೆಟ್‌ ನೀಡಬಾರದು! Ajit Pawar

09:20 PM Apr 24, 2023 | Team Udayavani |

ಪುಣೆ: “ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಸರ್ಕಾರದ ಯಾವುದೇ ಸೌಲಭ್ಯಗಳನ್ನು ನೀಡಬಾರದು,’ ಎಂದು ಎನ್‌ಸಿಪಿ ಹಿರಿಯ ನಾಯಕ ಅಜಿತ್‌ ಪವಾರ್‌ ಪ್ರತಿಪಾದಿಸಿದರು.

Advertisement

ಮಹಾರಾಷ್ಟ್ರದ ಬಾರಾಮತಿ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತದ ಜನಸಂಖ್ಯೆಯು ಚೀನ ಜನಸಂಖ್ಯೆಯನ್ನು ಮೀರಿಸಿದೆ.

ಸ್ವಾತಂತ್ರ್ಯದ ಸಂದರ್ಭದಲ್ಲಿ ದೇಶದ ಜನಸಂಖ್ಯೆ 35 ಕೋಟಿ ಇತ್ತು. ಈಗ ಅದು 142 ಕೋಟಿಗೆ ತಲುಪಿದೆ. ಇದಕ್ಕೆ ನಾವೆಲ್ಲರೂ ಹೊಣೆಗಾರರು,’ ಎಂದರು.

“ದೇಶ, ರಾಜ್ಯ, ಜಿಲ್ಲೆ ಮತ್ತು ಪ್ರದೇಶದ ಒಳಿತಿಗಾಗಿ ದಂಪತಿ ಒಂದು ಅಥವಾ ಎರಡು ಮಕ್ಕಳನ್ನು ಪಡೆಯಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಸರ್ಕಾರದ ಯಾವುದೇ ಸೌಲಭ್ಯ ಒದಗಿಸಬಾರದು,’ ಎಂದು ಅಜಿತ್‌ ಪವಾರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next