Advertisement

Muruga: ಮುರುಘಾ ಶ್ರೀ: ವಿಚಾರಣೆ ಮುಂದಕ್ಕೆ

11:48 PM Sep 29, 2023 | Team Udayavani |

ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್‌ 26ಕ್ಕೆ ಮುಂದೂಡಿದೆ. ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಶ್ರೀನಿವಾಸ ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು, ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್‌ 6ಕ್ಕೆ ನಿಗದಿಪಡಿಸಬೇಕು. ಹಿರಿಯ ವಕೀಲರು ವಾದ ಮಂಡಿಸಲಿದ್ದಾರೆ ಎಂದು ಮನವಿ ಮಾಡಿದರು.

Advertisement

ಅದಕ್ಕೊಪ್ಪದ ನ್ಯಾಯಪೀಠ, ಅರ್ಜಿ ವಿಚಾರಣೆಗೆ ಪ್ರತಿವಾರ ದಿನಾಂಕ ನಿಗದಿಯಾಗುತ್ತಿದೆ. ಆದರೆ ಪದೇಪದೆ ವಿಚಾರಣೆ ಮುಂದೂಡಲು ಮನವಿ ಮಾಡಲಾಗುತ್ತಿದೆ. ಹೀಗಾಗಿ ದಸರಾ ಹಬ್ಬದ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತು.

Advertisement

Udayavani is now on Telegram. Click here to join our channel and stay updated with the latest news.

Next