Advertisement

ಮಿ.ಖಾನ್ ನಿಮಗೆ ಭಾರತದ ಮುಸ್ಲಿಮರ ಚಿಂತೆ ಬೇಡ, ನಾವು ಜಿನ್ನಾ ಸಿದ್ದಾಂತವನ್ನು ಒಪ್ಪಿಲ್ಲ !

09:54 AM Jan 06, 2020 | Mithun PG |

ನವದೆಹಲಿ: ನಕಲಿ ವಿಡಿಯೋ ಅಪ್ಲೋಡ್ ಮಾಡಿ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡು ಮಾಡಲು ಯತ್ನಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಇಮ್ರಾನ್ ಖಾನ್ ಭಾರತದ ಮುಸ್ಲಿಮರ ಬಗ್ಗೆ ಚಿಂತಿಸುವುದಕ್ಕಿಂತ, ಪಾಕಿಸ್ಥಾನದ ಸ್ಥಿತಿಗತಿಗಳ ಬಗ್ಗೆ ಹೆಚ್ಚು ಆಲೋಚಿಸಬೇಕಾಗಿದೆ  ಎಂದು ಕಿಡಿಕಾರಿದ್ದಾರೆ.

Advertisement

ಭಾರತದ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೊಧಿಸುವ ಬರದಲ್ಲಿ ಇಮ್ರಾನ್ ಖಾನ್, ಪೊಲೀಸರು ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ‘ಮುಸ್ಲಿಮರ ಮೇಲೆ ಭಾರತದ ಪೊಲೀಸರು ದೌರ್ಜನ್ಯ ನೋಡಿ ಎಂದು ಟ್ವೀಟ್ ಮಾಡಿದ್ದರು. ಆದರೇ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದ ವಿಡಿಯೋ 2013ರ ಮೇ ತಿಂಗಳಿನಲ್ಲಿ ಬಾಂಗ್ಲಾದೇಶದ ರ್ಯಾಪಿಡ್ ಆ್ಯಕ್ಷನ್ ಬೆಟಾಲಿಯನ್ ನಡೆಸಿದ್ದ ಕಾರ್ಯಾಚರಣೆಯಾಗಿತ್ತು. ಈ ಹಿನ್ನಲೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇಮ್ರಾನ್ ಖಾನ್ ಅವರ ದೇಶದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿದೆ. ಭಾರತೀಯರು ಜಿನ್ನಾರ ತಪ್ಪು ಸಿದ್ದಾಂತವನ್ನು ತಿರಸ್ಕರಿಸಿದ್ದೇವೆ. ಮಾತ್ರವಲ್ಲದೆ ನಾವು ಹೆಮ್ಮೆಯ ಭಾರತೀಯ ಮುಸ್ಲಿಮರು , ನಾವು ಬದಲಾಗುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧವೂ ಕಿಡಿಕಾರಿದ ಓವೈಸಿ,  ಎನ್ ಆರ್ ಸಿಯನ್ನು ದೇಶದಾದ್ಯಂತ ಮೋದಿ ಆಡಳಿತ ಅವಧಿಯಲ್ಲಿ ಜಾರಿಗೆ ತರಲಾಗುವುದಿಲ್ಲ.  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಲು ಕಾಂಗ್ರೆಸ್, ಎಐಎಂಐಎಂ ಸೇರಿದಂತೆ ಇತರ ಪಕ್ಷಗಳೊಂದಿಗೆ ಒಗ್ಗೂಡಬೇಕೆಂದು ಕರೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next