Advertisement

ಸರ್ಕಾರದ ಉಳಿವಿಗಾಗಿ ಮೃತ್ಯುಂಜಯ ಹೋಮ

04:34 AM Jul 14, 2019 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ದೇವರ ಮೊರೆ ಹೋಗಿರುವ ಸಚಿವ ಎಚ್‌.ಡಿ.ರೇವಣ್ಣ, ಅದಕ್ಕಾಗಿ ಮೃತ್ಯುಂಜಯ ಹೋಮ ಮಾಡಿಸಿದ್ದಾರೆ.

Advertisement

ಶನಿವಾರ ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಾಲಯದಲ್ಲಿ ನಡೆದ ಮೃತ್ಯುಂಜಯ ಹೋಮದಲ್ಲಿ ಪಾಲ್ಗೊಂಡಿದ್ದ ರೇವಣ್ಣ, ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಗಣಪತಿ ದೇವಾಲಯದಲ್ಲಿ ಎಂಟು ಆರ್ಚಕರು ಮೃತ್ಯುಂಜಯ ಹೋಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ರೇವಣ್ಣ ಹಾಗೂ ಅವರ ಕುಟುಂಬದ ಇತರ ಸದಸ್ಯರು ಭಾಗಿಯಾಗಿದ್ದರು. ಅಲ್ಲದೆ, ರೇವಣ್ಣ ಅವರು ಭಾನುವಾರ ಶೃಂಗೇರಿ ಸೇರಿ ಮಲೆನಾಡು, ಕರಾವಳಿ ಭಾಗದ ಹಲವು ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸುವ ಸಾಧ್ಯತೆಯಿದೆ.

ಶುಕ್ರವಾರ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬರಿಗಾಲಿನಲ್ಲೇ ವಿಧಾನಸೌಧಕ್ಕೆ ಆಗಮಿಸಿ, ಸದನದ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ಅದಕ್ಕೂ ಮೊದಲು, ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ತಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಪುಟ ಸದಸ್ಯರಿಗೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next