Advertisement

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

02:17 AM Oct 02, 2024 | Team Udayavani |

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಹೋರಾಟದ ಫ‌ಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್‌ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು. ಕಾನೂನಿನಿಂದ ನುಣುಚಿಕೊಳ್ಳಲು ನೇರವಾಗಿ ಪತ್ರ ಬರೆಯದೆ, ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿ ತನ್ನ ಮಿತಿ ಮೀರಿ ವರ್ತಿಸಿರುವುದು ಖಂಡನೀಯ. ಸರಕಾರದ ಮುಖ್ಯ ಕಾರ್ಯದರ್ಶಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next