Advertisement

Muda case: ‘ಕಾನೂನಿಗಿಂತ ಯಾರು ದೊಡ್ಡವರಲ್ಲ….’: ಸಿಎಂ ವಿಚಾರದಲ್ಲಿ ಸೋಮಣ್ಣ ಹೇಳಿಕೆ

03:52 PM Sep 26, 2024 | keerthan |

ಶಿವಮೊಗ್ಗ: ಕಾನೂನಿಗಿಂತ ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಜೊತೆ ನಾನು ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಕಾನೂನುನನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸೂಕ್ಷ್ಮ ರಾಜಕಾರಣಿ. ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ಕೊಡುತ್ತಾರೆ ಎನ್ನುವುದು ನನ್ನ ವೈಯಕ್ತಿಕ ಅನಿಸಿಕೆ ಎಂದರು.

ತನಿಖೆಯಾಗುತ್ತಿದೆ. ಈಗಾಗಲೇ ಎಫ್ ಐಆರ್ ಕೂಡ ಆಗಿದೆ. ರಾಜ್ಯದ ಮುಖ್ಯಮಂತ್ರಿ ಮೇಲೆ ಎಫ್ಐಆರ್ ಆಗಿದೆ. ಅದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ. ತನಿಖೆ ಎದುರಿಸಲು ರಾಜೀನಾಮೆ ಕೊಡುತ್ತಾರೆ ಎನ್ನುವುದು ನನ್ನ ಅಭಿಪ್ರಾಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next