Advertisement

MUDA Case: ದಾಖಲೆ ಪರಿಶೀಲನೆಗಿಂತ ಹೆಚ್ಚಿನದೇನು ಸಾಧ್ಯ: ಡಿ.ಕೆ. ಶಿವಕುಮಾರ್‌

12:35 AM Oct 19, 2024 | Team Udayavani |

ಬೆಂಗಳೂರು: ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಇ.ಡಿ.ಯವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಇ.ಡಿ.ಯವರು ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ ಎಂದರು. ನನಗೆ ಬಂದ ಮಾಹಿತಿ ಪ್ರಕಾರ ಇ.ಡಿ.ಯವರು ದಾಖಲೆಗಳನ್ನು ಕೇಳಿದ್ದರು, ಇವರು ದಾಖಲೆ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ದಾಖಲೆ ನೀಡುವುದು ತಡವಾಗಿರಬಹುದು. ಇದಕ್ಕಾಗಿ ಇ.ಡಿ.ಯವರೇ ಕಚೇರಿಗೆ ಹೋಗಿರಬಹುದು ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next