Advertisement

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

01:02 PM Oct 16, 2024 | Team Udayavani |

ಮೈಸೂರು: ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಿದ್ದು, ಹುದ್ದೆಗೆ ಬುಧವಾರ(ಅ16) ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು. ಆದರೆ, ಮರಿಗೌಡ ಅವರು, ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಗರದ ಆಯಕಟ್ಟಿನ ಸ್ಥಳದಲ್ಲಿ 14 ನಿವೇಶನ ಮಂಜೂರಾದ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಲ ಭೂಮಾಲಿಕನ ವಿರುದ್ಧ ಎಫ್ಐಆರ್‌ ದಾಖಲಾಗಿರುವುದಲ್ಲದೇ ತನಿಖೆಯೂ ನಡೆಯುತ್ತಿದೆ.

ಮುಡಾಗೆ ಆಡಳಿತಾಧಿಕಾರಿ ನೇಮಕ?
ಮುಡಾ ಹಗರಣ ಸಂಬಂಧ ತೀವ್ರ ಮುಜುಗರ ಅನುಭವಿಸಿರುವ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಮೈಸೂರು ನಗರಾಭಿವೃದ್ಧಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next