Advertisement

MUDA: ದೂರುದಾರ ಗಂಗರಾಜು ಅವರಿಗೆ ಇ.ಡಿ. ನೋಟಿಸ್‌

01:19 AM Oct 27, 2024 | Team Udayavani |

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ 50:50 ನಿವೇಶನ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಇ.ಡಿ. ನೋಟಿಸ್‌ ಜಾರಿಗೊಳಿಸಿದೆ.

Advertisement

ಮುಡಾದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಗಂಗರಾಜು ಕೂಡ ಹೋರಾಟ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಮತ್ತೂಂದು ಭೂ ಅಕ್ರಮದ ಕುರಿತು ಆರೋಪಿಸಿದ್ದರು. ಕೆಆರ್‌ಎಸ್‌ ರಸ್ತೆಯಲ್ಲಿ 20 ಗುಂಟೆ ಜಮೀನು ಖರೀದಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಮೊದಲ ಪ್ರಕರಣದಲ್ಲಿ ಕೆಸರೆಯ ಸರ್ವೇ ನಂಬರ್‌ 462 ಮತ್ತು 464ರ 3.16 ಎಕರೆ ಭೂಮಿ ಹಾಗೂ 14 ಸೈಟ್‌ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಿದ್ದರು. ಹೀಗಾಗಿ ವೈಯಕ್ತಿಕ ಮಾಹಿತಿಗಳ ಜತೆಗೆ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ನೋಟಿಸ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಅ. 28ರಂದು ಗಂಗರಾಜು ವಿಚಾರಣೆಗೆ ಹಾಜರಾಗಲಿ ದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next