Advertisement

MUDA ಹಗರಣ; ಸಚಿವ ಬೈರತಿ, ಎಸ್‌ಪಿ ಸುಜೀತ್‌ ವಿರುದ್ಧ ದೂರು

12:58 AM Oct 08, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಸಂಬಂಧ ದಾಖಲೆಗಳನ್ನು ಕೊಂಡೊಯ್ದ ಬಗ್ಗೆ ನಗರಾಭಿ ವೃದ್ಧಿ ಸಚಿವ ಬೈರತಿ ಸುರೇಶ್‌ ಮತ್ತು ಮೈಸೂರು ಲೋಕಾ ಯುಕ್ತದ ಅಂದಿನ ಪೊಲೀಸ್‌ ವರಿಷ್ಠಾಧಿಕಾರಿ ಸುಜೀತ್‌ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೋಮವಾರ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೋಮವಾರ ದೂರು ನೀಡಿದ್ದಾರೆ.

Advertisement

ಮೈಸೂರು ಲೋಕಾಯುಕ್ತದ ಅಂದಿನ ಪೊಲೀಸ್‌ ವರಿಷ್ಠಾಧಿಕಾರಿ ಸುಜೀತ್‌ ಲೋಕಾಯುಕ್ತ ಸರ್ಚ್‌ ವಾರೆಂಟ್‌ ಆಧರಿಸಿ ಜು. 26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಯಾವುದೇ ದಾಖಲೆ ಗಳನ್ನು ವಶಪಡಿಸಿಕೊಳ್ಳದೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೆ ಮಾಹಿತಿ ನೀಡಿದ್ದರು. ಬಳಿಕ ಸಚಿವ ಭೈರತಿ ಸುರೇಶ್‌, ಆತುರದಲ್ಲೇ ಹೆಲಿಕಾಪ್ಟರ್‌ ಬಳಸಿ ಮೈಸೂ ರಿಗೆ ಬಂದು ಕಡತಗಳನ್ನು ತೆಗೆದುಕೊಂಡು ಹೋಗಿ¨ªಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next