Advertisement

ಕ್ವಾರಂಟೈನ್‌ ಅವಧಿ ಪೂರ್ಣ: ಕಾರ್ಮಿಕರ ಬಿಡುಗಡೆ

05:05 PM May 30, 2020 | Team Udayavani |

ಮುದಗಲ್ಲ: ಪಟ್ಟಣದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 31 ಜನರು 14 ದಿನಗಳು ಕ್ವಾರಂಟೈನ್‌ ಪೂರೈಸಿ ಕೋವಿಡ್ ನೆಗೆಟಿವ್‌ ವರದಿ ಬಂದಿರುವ ಕಾರಣ ಅವರನ್ನು ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ನರಸಿಂಹಮೂರ್ತಿ ಹೇಳಿದರು.

Advertisement

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋವಿಡ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಪಟ್ಟಣದ 33 ಜನರ ಪೈಕಿ 31ಜನರು ಆರೋಗ್ಯವಾಗಿದ್ದು, ಅವರಿಗೆ ಯಾವುದೇ ಕೋವಿಡ್ ವೈರಸ್‌ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. 31ಜನರಿಗೆ ನೆಗೆಟಿವ್‌ ಬಂದಿದ್ದು, ಅವರ ಮನೆಗೆ ಕಳುಹಿಸಲಾಗಿದೆ. ಇಬ್ಬರ ವರದಿ ಬಾರದ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಪತ್ರಿಕೆಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಅಮರೇಗೌಡ ಪಾಟೀಲ್‌ ಪುರಸಭೆ, ಪೊಲೀಸ್‌ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next